25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

ನಾರಾವಿ:”ವಿಶ್ವ ಪರಿಸರ ದಿನಾಚರಣೆಯೆಂದರೆ ಕೇವಲ ಗಿಡ ನೆಡುವ ಕಾರ್ಯಕ್ರಮವಲ್ಲ. ಈಗಿರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವುದೇ ಪರಿಸರ ದಿನದ ನಿಜವಾದ ಉದ್ದೇಶ. ಪರಿಸರವನ್ನು ಉಳಿಸದಿದ್ದರೆ ಮುಂದೊಂದು ದಿನ ಪರಿತಪಿಸಬೇಕಾದೀತು. ಪ್ಲಾಸ್ಟಿಕ್ ಮುಕ್ತ ಪರಿಸರ ಆರೋಗ್ಯಕ್ಕೆ ಸುಖಕರ”ಎಂದು ಸಂತ ಅಂತೋನಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ದಿನೇಶ್ ಬಿ ಕೆ ಬಳoಜ ಅಭಿಪ್ರಾಯ ಪಟ್ಟರು.

ಅವರು ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿ ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮ ದಲ್ಲಿ ಮಾತನಾಡುತ್ತಿದ್ದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವಂ. ಡಾ. ಆಲ್ವಿನ್ ಸೆರಾವೋ”ಗಿಡಮರಗಳಿಗೂ ಜೀವವಿರುತ್ತದೆ. ಅವುಗಳೂ ಉಸಿರಾಡುತ್ತದೆ. ನಾವು ಸ್ವಚ್ಛವಾಗಿ ಉಸಿರಾಡಬೇಕಾದರೆ ನಮ್ಮ ಪರಿಸರವು ಸ್ವಚ್ಛವಾಗಿರಬೇಕು.

ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು”ಎಂದು ತಿಳಿಸಿದರು. ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ಉಪ ಪ್ರಾoಶುಪಾಲರಾದ ಸಂತೋಷ್ ಸಲ್ದಾನ, ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರದೀಪ್ ಬಿ, ಹಾಗೂ ಕಾಲೇಜಿನ ವಿದ್ಯಾರ್ಥಿ ಪರಿಷತ್ ನ ನಾಯಕಿ ಕು.ಗ್ಲೆನಿಷಾ ಮಿರಾoದ ಉಪಸ್ಥಿತರಿದ್ದರು. ವಿದ್ಯಾರ್ಥಿಗನಿ ಹೆಂಝಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya
error: Content is protected !!