ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಮುಂಡಾಜೆ :ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜೂ 23 ರಂದು ಮುಂಡಾಜೆ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು.


ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವಂತೆ ಆಗ್ರಹಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಮಲತಾ ಶೆಟ್ಟಿ, ಸದಸ್ಯರಾದ ರಾಮಣ್ಣ ಶೆಟ್ಟಿ, ಅಶ್ವಿನಿ, ವಿಶ್ವನಾಥ್ ಶೆಟ್ಟಿ ಮುಂಡ್ರುಪ್ಪಾಡಿ,ವಿಮಲಾ ಶೇಖರ್,ಯಶೋದಾ, ರವಿಚಂದ್ರ, ರಂಜಿನಿ, ದಿಶಾ ಪಠವರ್ಧನ್, ಸಿಎ ಬ್ಯಾಂಕ್ ನಿರ್ದೇಶಕರಾದ ಕಜೆ ವೆಂಕಟೇಶ್ ಭಟ್,ಅಶ್ವಿನಿ ಹೆಬ್ಬಾರ್ ಹಾಗೂ ರವಿ ಪೂಜಾರಿ,ಬಿಜೆಪಿ ಬೆಳ್ತಂಗಡಿ ಮಂಡಲದ ಉಪಾಧ್ಯಕ್ಷರಾದ ಚೆನ್ನಕೇಶವ್ ಅರಸಮಜಲು, ಅಲ್ಪ ಸಂಖ್ಯಾತ ಮೋರ್ಚಾ ದ ಅಧ್ಯಕ್ಷ ಸೆಬಾಸ್ಟಿಯನ್, ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಪೂರ್ಣಿಮಾ ಜಯಂತ್ ಸೇರಿಂದಂತೆ ಬಿಜೆಪಿ ಪಕ್ಷದ ಬೂತ್ ಸಮಿತಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು,ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!