30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

ಮಲವಂತಿಗೆ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ,ಶಕ್ತಿ ಕೇಂದ್ರ ಮಲವಂತಿಗೆಯ ಇದರ ವತಿಯಿಂದ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಜೂ.23ರಂದು ಮಲವಂತಿಗೆ ಗ್ರಾ.ಪಂ ಎದುರು ನಡೆಯಿತು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಕಾಶ್ ಜೈನ್ ಇವರು ಮಾತನಾಡಿ ಗ್ರಾಮ ಮಟ್ಟದ ಸಮಸ್ಯೆ ಕುರಿತು ರಾಜ್ಯ ಸರ್ಕಾರ ಅವ್ಯವೆವಸ್ಥೆ ಬಗ್ಗೆ ಮಾತಾಡಿ ಸರ್ಕಾರ ಸೌಲಭ್ಯ ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರಿಗೆ ಸಿಗುವ ಮೂಲ ಸೌಕರ್ಯ ವೆವಸ್ಥೆ ಅನುದಾನ ವಿವಿಧ ರೀತಿಯ ಗ್ರಾಮ ಮಟ್ಟದಲ್ಲಿ ಸಿಗುವ ಅನುದಾನ ತಕ್ಷಣ ಒದಗಿಸಬೇಕು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು , ಪ್ರಭಾರಿ ಈಶ್ವರ ಬೈರೆ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು , ಹಾಗೂ ಸದಸ್ಯರು ದಿನೇಶ್ ಡಿ ಗೌಡ ಕಜಕ್ಕೆ ಪವಿತ್ರ,ಮಾಜಿ ಸದಸ್ಯರು ಕೇಶವ್ MK, ಬಂಗಾಡಿ CA ಬ್ಯಾಂಕ್ ನಿರ್ದೇಶಕರಾದ ಸೀನಪ್ಪ ಗೌಡ ನೇತ್ರಕೊಡಂಗೆ,ಬೂತ್ ಸಮಿತಿ ರಾಧಾಕೃಷ್ಣ ಗೌಡ,ಅಶೋಕ್ ಗೌಡ ಕಾರ್ಯದರ್ಶಿ ಪುರಂದರ ಗೌಡ, ವಿನಯ್ ಕರಿಯಲು, ಯುವಮೋರ್ಚಾ ಅಧ್ಯಕ್ಷರಾದ ಜಯಂತ ಕೊಂಡಾಲು, ಹಾಗೂ ಬಿಜೆಪಿ ಪಕ್ಷದ ಹಿರಿಯರ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಹಾಗೂ ತೀಕ್ಷಿತ್ ಕೆ. ಕಲ್ಬೆಟ್ಟು ಸ್ವಾಗತಿಸಿ ವಂದನಾರ್ಪಣೆ ಮಾಡಿದರು.

Related posts

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಬೆಳ್ತಂಗಡಿ: ಕೋರ್ಟ್ ರಸ್ತೆಯ ನಿವಾಸಿ ಜಯರಾಮ ನಿಧನ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!