26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು: ಡೋಂಗ್ರೆ ಕುಟುಂಬಸ್ಥರಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ ಶೈಕ್ಷಣಿಕ ಪರಿಕರಗಳ 17 ನೇ ವರ್ಷದ ಉಚಿತ ವಿತರಣಾ ಸಮಾರಂಭ ಜೂ. 23 ರಂದು ನಾಲ್ಕೂರು ಗ್ರಾಮದ ಸೂಳಬೆಟ್ಟು ಸ.ಕಿ.ಪ್ರಾ.ಶಾಲೆಯಲ್ಲಿ ನಡೆಯಿತು.


ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘ( ಐ.ಡಿ.ಎ.)ದ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ರೋಟರಿ ನಿಯೋಜಿತ ಅಧ್ಯಕ್ಷ ಉಜಿರೆ ಎಸ್.ಡಿ.ಎಂ.ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಫ್ರೊ. ಪಿ.ಪಿ.ಪ್ರಭು ಉದ್ಘಾಟಿಸಿದರು.


ಐ.ಡಿ.ಎ.ಪುತ್ತೂರು ಘಟಕದ ಅಧ್ಯಕ್ಷೆ ಡಾl ಆಶಾ ಪಿದಮಲೆ, ಬೆಳ್ತಂಗಡಿ ಸ್ವಾತಿ ದಂತ ಚಿಕಿತ್ಸಾಲಯದ ಡಾl ಶಶಿಧರ ಡೋಂಗ್ರೆ, ಬಳಂಜ ಗ್ರಾ.ಪಂ.ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ , ಡಾl ರಾಘವೇಂದ್ರ ಪಿದಮಲೆ, ಗೀತಾಪ್ರಭು, ಡಾl ಸುಷ್ಮಾ ಡೋಂಗ್ರೆ , ಮೋಹನದಾಸ್ ಅಳದಂಗಡಿ ಉಪಸ್ಥಿತರಿದ್ದರು.


ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರವೀಣ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳು ಮಕ್ಕಳಿಗೆ ಸಮವಸ್ರ್ತ, ಪುಸ್ತಕ, ಚೀಲ, ಕೊಡೆ ಮತ್ತಿತರ ಪರಿಕರಗಳನ್ನು ವಿತರಿಸಿದರು.
ಈ ಬಾರಿಯ ಜೆ.ಇ.ಇ. (ಅಡ್ವಾನ್ಸ್) ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯುನ್ನತ ಸ್ಥಾನ ಪಡೆದು ಐ.ಐ.ಟಿ.ಗೆ ಆಯ್ಕೆಯಾದ ಅಳದಂಗಡಿಯ ಅಚಿಂತ್ಯ ದಾಸ್ ಅವರಿಗೆ ಮುಂದಿನ ವಿದ್ಯಾಭ್ಯಾಸದ ಸಲುವಾಗಿ ವಿದ್ಯಾನಿಧಿಯಾಗಿ ರೂ. 25,000 ನಗದನ್ನು ಡಾl ಶಶಿಧರ ಡೋಂಗ್ರೆ ಅವರು ಹಸ್ತಾಂತರಿಸಿದರು.


ಅಂಗನವಾಡಿ ಕಾರ್ಯಕರ್ತೆ ಶಶಿಕಲಾ, ಅಕ್ಷರ ದಾಸೋಹದ ಲವೀನಾ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ‌ ಮೋರಾಸ್ ಸ್ವಾಗತಿಸಿದರು. ಸಹ ಶಿಕ್ಷಕಿ ರೀಟಾ ರೋಡ್ರಿಗಸ್ ವಂದಿಸಿದರು. ಶಾಲಾ ಹಿರಿಯ ವಿದ್ಯಾರ್ಥಿ ದೀಪಕ ಆಠವಳೆ ಕಾರ್ಯಕ್ರಮ‌ ನಿರ್ವಹಿಸಿದರು.

Related posts

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಮಚ್ಚಿನ: ರುದ್ರಭೂಮಿ ಸಮೀಪ ಆಕಸ್ಮಿಕ ಬೆಂಕಿ

Suddi Udaya
error: Content is protected !!