25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ


ಅಳದಂಗಡಿ : ಇಲ್ಲಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ರೂ 9 ಲಕ್ಷ ಸಿಎಸ್ಆರ್ ಅನುದಾನದಿಂದ ನೀಡಿದ ಸುಸಜ್ಜಿತ ಭೌತಶಾಸ್ತ್ರ ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಪ್ರಯೋಗಾಲಯ ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ ಜೂ. 21 ರಂದು ನಡೆಯಿತು.

ಎಂಆರ್‌ಪಿಎಲ್ ಸಂಸ್ಥೆಯ ಇನ್ಫಾರ್ಮಶನ್ ಸೈನ್ಸ್ ವಿಭಾಗದ ಚೀಫ್ ಜನರಲ್ ಮ್ಯಾನೇಜರ್ ಅಳದಂಗಡಿ ಅರ್ವಗುತ್ತು ಶ್ರೀ ಶರತ್ ಬುಡಾಲೆ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ, ಉದ್ಘಾಟಿಸಿ, ವಿದ್ಯಾರ್ಥಿಗಳು ಸತತ ಪರಿಶ್ರಮ ಏಕಾಗ್ರತೆಯಿಂದ ಜ್ಞಾನ ಸಂಪಾದಿಸಿ ಸಮಾಜದಲ್ಲಿ ಉತ್ತಮ ಸಾಧಕರಾಗಬೇಕು ಪ್ರಯೋಗಾಲಯದ ಜ್ಞಾನವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಡೆದು ಇತರ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಬೇಕು ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಗ್ರಾ ಪಂ ಅಳದಂಗಡಿ ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಗ್ರಾ ಪಂ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಇಂಜಿನಿಯರ್ ಪ್ರತೀಕ್ ಶೆಟ್ಟಿ ನೊಚ್ಚ, ಪ್ರೌಢಶಾಲಾ ಹಿರಿಯ ಶಿಕ್ಷಕರಾದ ಚಂದ್ರಶೇಖರ್ ರಾವ್ ಉಪಸ್ಥಿತರಿದ್ದು ಶುಭ ಕೋರಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಸನ್ನಿ ಕೆ ಎಂ ವಹಿಸಿ ಎಂ ಆರ್‌ಪಿಎಲ್ ಸಂಸ್ಥೆಯ ಆಡಳಿತ ಮಂಡಳಿಗೆ ಕೃತಜ್ಞತೆಯನ್ನು ಸಲ್ಲಿಸಿ ಮುಂದೆಯೂ ಕಾಲೇಜಿನ ಅಭಿವೃದ್ಧಿಗೆ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಅನುದಾನ ಒದಗಿಸಲು ಕಾರಣೀಕರ್ತರಾದ ಚೀಫ್ ಜನರಲ್ ಮ್ಯಾನೇಜರ್ ಶರತ್ ಬುಡಾಲೆ ಹಾಗೂ ಸುಸಜ್ಜಿತ ಪ್ರಯೋಗಾಲಯವನ್ನು ನಾವಿನ್ಯ ರೂಪದಲ್ಲಿ ನಿರ್ಮಿಸಿದ ಇಂಜಿನಿಯರ್ ಪ್ರತೀಕ್ ಶೆಟ್ಟಿ ನೊಚ್ಚ ಇವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಅರ್ಥಶಾಸ್ತ್ರ ಉಪನ್ಯಾಸಕರಾದ ಹರೀಶ್ ರೈ ಸ್ವಾಗತಿಸಿದ ಕಾರ್ಯಕ್ರಮವನ್ನು ಜೀವಶಾಸ್ತ್ರ ಉಪನ್ಯಾಸಕರಾದ ಪ್ರಶಾಂತ್ ನಿರೂಪಿಸಿ, ಗಣಿತ ಉಪನ್ಯಾಸಕರಾದ ಸದಾನಂದ ಕುಲಾಲ್ ವಂದಿಸಿದರು. ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಉಪನ್ಯಾಸಕವೃಂದದವರು ಸಹಕಾರ ನೀಡಿದರು.

Related posts

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya
error: Content is protected !!