22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

ಕಕ್ಯಪದವು: ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ 2025 – 26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂ. 23ರಂದು ಚುನಾವಣೆಯನ್ನು ನಡೆಸಲಾಯಿತು.

ಎಲ್ಲಾ ವಿದ್ಯಾರ್ಥಿಗಳ ಮತದಾನ ಪ್ರಕ್ರಿಯೆಯು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ (EVM) ಯ ಮೂಲಕ ನೆರವೇರಿತು. ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಮತದಾನದ ಕಾರ್ಯ ಚಟುವಟಿಕೆಗಳನ್ನು ಆಧುನಿಕ ಮೊಬೈಲ್ ತಂತ್ರಜ್ಞಾನದ ಮೂಲಕ ಮಾಡಲಾಯಿತು. ವಿವಿಧ ಶಿಕ್ಷಕ ಸಿಬ್ಬಂದಿಗಳ ಸಹಕಾರದಿಂದ ಮತದಾನ ಪ್ರಕ್ರಿಯೆಯು ಶಿಸ್ತಿನಿಂದ ಮತ್ತು ಯಶಸ್ವಿಯಾಗಿ ಪೂರ್ಣಗೊಂಡಿತು. ಹಾಗೂ ಮತ ಎಣಿಕೆಯನ್ನು ಮಾಡಿ ಫಲಿತಾಂಶ ಘೋಷಣೆಯನ್ನು ಮಾಡಲಾಯಿತು.

ಶಾಲಾ ವಿದ್ಯಾರ್ಥಿ ಸಂಘದ ನಾಯಕಿಯಾಗಿ ಮನಸ್ವಿನಿ . ಕೆ, ಉಪನಾಯಕಿಯಾಗಿ ಅದಿತಿ ಎಂ. ಪ್ರಭು ಆಯ್ಕೆಯಾದರು. ಹಾಗೂ ಶಿಕ್ಷಣ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ ಮಂತ್ರಿಗಳನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಹಾಗೂ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂಬುದಾಗಿ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಕೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ವಿಜೇತರನ್ನು ಅಭಿನಂದಿಸಿದರು.

Related posts

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!