ಧರ್ಮಸ್ಥಳ: ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ (33ವ) ರವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 23ರಂದು ರಾತ್ರಿ ನಡೆದಿದೆ
ಈತ ತನ್ನ ಬೈಕಿನಲ್ಲಿ ಶ್ವಾನವನ್ನು ಕೂರಿಸಿಕೊಂಡು ಸುತ್ತಾಡುತ್ತಿದ್ದ ವೀಡಿಯೋ ವೈರಲ್ ಆಗಿತ್ತು. ಮತ್ತಿಲದ ದಿ. ಐತ ಅವರ ಪುತ್ರನಾದ ಈತ ಕೃಷಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ.











