22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ


ವೇಣೂರು: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ಇದರ ವಾರ್ಷಿಕ ಮಹಾಸಭೆ ಮಂಡಳಿಯ ಅಧ್ಯಕ್ಷ ರವಿ ಕುಮಾರ್ ಕೆ ವೈ ಇವರ ಅಧ್ಯಕ್ಷತೆಯಲ್ಲಿ ಮಂಜುಶ್ರೀ ಭಜನಾ ಮಂದಿರದಲ್ಲಿ ಜರುಗಿತು.


2023-24 ಹಾಗೂ 2024-25 ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ತನಿಯಪ್ಪ ರಾಣ್ಯ ಮಂಡಿಸಿದರು.
2024-25 ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ಕೋಶಾಧಿಕಾರಿ ಜಯಪ್ರಸಾದ್ ಕುಲಾಲ್ ಮಂಡಿಸಿದರು.
2025-26 ಹಾಗೂ 2026-27 ನೇ ಸಾಲಿನ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಆನಂದ ಟೈಲರ್ ನೀಲಂಬೋಡಿ, ಗೌರವಾಧ್ಯಕ್ಷರಾಗಿ ಅನಿಲ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಿವಪ್ರಸಾದ್ ಹೆಗ್ಡೆ ನೆಲ್ಲಿಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ ಗೋಳಿಯಂಗಡಿ, ಕೋಶಾಧಿಕಾರಿಯಾಗಿ ಸಂತೋಷ್ ಕುಲಾಲ್ ಕಲ್ಲಾಜೆ, ಜೊತೆ ಕಾರ್ಯದರ್ಶಿಯಾಗಿ ನಿರಂಜನ್ ಸಾಲಿಯಾನ್ ಪಾರೊಟ್ಟು ಪದಾಧಿಕಾರಿಗಳಾಗಿ ಆಯ್ಕೆಯಾದರು.

ರವಿಕುಮಾರ್ ಕೆ ವೈ, ತನಿಯಪ್ಪ ರಾಣ್ಯ, ಧರ್ಣಪ್ಪ ಪೂಜಾರಿ, ತಿಮ್ಮಪ್ಪ ಪೊಸಲಾಯಿ, ಚಂದ್ರ ದೇವಾಡಿಗ, ಜಗದೀಶ್ ಆಚಾರ್ಯ, ಸಂಜೀವ ಪೂಜಾರಿ, ವರದ ಕುಲಾಲ್, ಹರೀಶ್ ಕುಲಾಲ್, ಹರೀಶ್ ಆಚಾರ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು.


ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರವಿಕುಮಾರ್ ಕೆ ವೈ ರವರು ಮಾತಾಡುತ್ತಾ , ಕಳೆದ ಎರಡು ವರ್ಷಗಳಿಂದ ಮಂಡಳಿಯು ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ನಡೆಸಿದ್ದು ಮಂಡಳಿಯ ಪದಾಧಿಕಾರಿಗಳು ಹಾಗೂ ಊರ ಭಕ್ತಾಭಿಮಾನಿಗಳು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು. ಹಿರಿಯರಾದ ಕೆ ವೈ ಈಶ್ವರ ಭಟ್ ರವರು ಉಪಸ್ಥಿತರಿದ್ದರು.
ಜಗನ್ನಾಥ ದೇವಾಡಿಗರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷರಾದ ಭರತ್ ರಾಜ್ ಅಮೈ ಸ್ವಾಗತಿಸಿದರು. ಸಂತೋಷ್ ಕುಲಾಲ್ ಧನ್ಯವಾದ ಸಮರ್ಪಿಸಿದರು.

Related posts

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya
error: Content is protected !!