September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ


ವೇಣೂರು: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ಇದರ ವಾರ್ಷಿಕ ಮಹಾಸಭೆ ಮಂಡಳಿಯ ಅಧ್ಯಕ್ಷ ರವಿ ಕುಮಾರ್ ಕೆ ವೈ ಇವರ ಅಧ್ಯಕ್ಷತೆಯಲ್ಲಿ ಮಂಜುಶ್ರೀ ಭಜನಾ ಮಂದಿರದಲ್ಲಿ ಜರುಗಿತು.


2023-24 ಹಾಗೂ 2024-25 ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ತನಿಯಪ್ಪ ರಾಣ್ಯ ಮಂಡಿಸಿದರು.
2024-25 ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ಕೋಶಾಧಿಕಾರಿ ಜಯಪ್ರಸಾದ್ ಕುಲಾಲ್ ಮಂಡಿಸಿದರು.
2025-26 ಹಾಗೂ 2026-27 ನೇ ಸಾಲಿನ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಆನಂದ ಟೈಲರ್ ನೀಲಂಬೋಡಿ, ಗೌರವಾಧ್ಯಕ್ಷರಾಗಿ ಅನಿಲ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಿವಪ್ರಸಾದ್ ಹೆಗ್ಡೆ ನೆಲ್ಲಿಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ ಗೋಳಿಯಂಗಡಿ, ಕೋಶಾಧಿಕಾರಿಯಾಗಿ ಸಂತೋಷ್ ಕುಲಾಲ್ ಕಲ್ಲಾಜೆ, ಜೊತೆ ಕಾರ್ಯದರ್ಶಿಯಾಗಿ ನಿರಂಜನ್ ಸಾಲಿಯಾನ್ ಪಾರೊಟ್ಟು ಪದಾಧಿಕಾರಿಗಳಾಗಿ ಆಯ್ಕೆಯಾದರು.

ರವಿಕುಮಾರ್ ಕೆ ವೈ, ತನಿಯಪ್ಪ ರಾಣ್ಯ, ಧರ್ಣಪ್ಪ ಪೂಜಾರಿ, ತಿಮ್ಮಪ್ಪ ಪೊಸಲಾಯಿ, ಚಂದ್ರ ದೇವಾಡಿಗ, ಜಗದೀಶ್ ಆಚಾರ್ಯ, ಸಂಜೀವ ಪೂಜಾರಿ, ವರದ ಕುಲಾಲ್, ಹರೀಶ್ ಕುಲಾಲ್, ಹರೀಶ್ ಆಚಾರ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು.


ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರವಿಕುಮಾರ್ ಕೆ ವೈ ರವರು ಮಾತಾಡುತ್ತಾ , ಕಳೆದ ಎರಡು ವರ್ಷಗಳಿಂದ ಮಂಡಳಿಯು ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ನಡೆಸಿದ್ದು ಮಂಡಳಿಯ ಪದಾಧಿಕಾರಿಗಳು ಹಾಗೂ ಊರ ಭಕ್ತಾಭಿಮಾನಿಗಳು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು. ಹಿರಿಯರಾದ ಕೆ ವೈ ಈಶ್ವರ ಭಟ್ ರವರು ಉಪಸ್ಥಿತರಿದ್ದರು.
ಜಗನ್ನಾಥ ದೇವಾಡಿಗರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷರಾದ ಭರತ್ ರಾಜ್ ಅಮೈ ಸ್ವಾಗತಿಸಿದರು. ಸಂತೋಷ್ ಕುಲಾಲ್ ಧನ್ಯವಾದ ಸಮರ್ಪಿಸಿದರು.

Related posts

ಪುದುವೆಟ್ಟು ಶಾಲೆಯಲ್ಲಿ ಬಿತ್ತಿ ಪತ್ರಿಕೆ ‘ಸಂಚಯ’ ಬಿಡುಗಡೆ:

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya
error: Content is protected !!