ನಾರಾವಿ:”ವಿಶ್ವ ಪರಿಸರ ದಿನಾಚರಣೆಯೆಂದರೆ ಕೇವಲ ಗಿಡ ನೆಡುವ ಕಾರ್ಯಕ್ರಮವಲ್ಲ. ಈಗಿರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವುದೇ ಪರಿಸರ ದಿನದ ನಿಜವಾದ ಉದ್ದೇಶ. ಪರಿಸರವನ್ನು ಉಳಿಸದಿದ್ದರೆ ಮುಂದೊಂದು ದಿನ ಪರಿತಪಿಸಬೇಕಾದೀತು. ಪ್ಲಾಸ್ಟಿಕ್ ಮುಕ್ತ ಪರಿಸರ ಆರೋಗ್ಯಕ್ಕೆ ಸುಖಕರ”ಎಂದು ಸಂತ ಅಂತೋನಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ದಿನೇಶ್ ಬಿ ಕೆ ಬಳoಜ ಅಭಿಪ್ರಾಯ ಪಟ್ಟರು.

ಅವರು ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿ ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮ ದಲ್ಲಿ ಮಾತನಾಡುತ್ತಿದ್ದರು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವಂ. ಡಾ. ಆಲ್ವಿನ್ ಸೆರಾವೋ”ಗಿಡಮರಗಳಿಗೂ ಜೀವವಿರುತ್ತದೆ. ಅವುಗಳೂ ಉಸಿರಾಡುತ್ತದೆ. ನಾವು ಸ್ವಚ್ಛವಾಗಿ ಉಸಿರಾಡಬೇಕಾದರೆ ನಮ್ಮ ಪರಿಸರವು ಸ್ವಚ್ಛವಾಗಿರಬೇಕು.
ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು”ಎಂದು ತಿಳಿಸಿದರು. ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ಉಪ ಪ್ರಾoಶುಪಾಲರಾದ ಸಂತೋಷ್ ಸಲ್ದಾನ, ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರದೀಪ್ ಬಿ, ಹಾಗೂ ಕಾಲೇಜಿನ ವಿದ್ಯಾರ್ಥಿ ಪರಿಷತ್ ನ ನಾಯಕಿ ಕು.ಗ್ಲೆನಿಷಾ ಮಿರಾoದ ಉಪಸ್ಥಿತರಿದ್ದರು. ವಿದ್ಯಾರ್ಥಿಗನಿ ಹೆಂಝಿಲ್ ಕಾರ್ಯಕ್ರಮ ನಿರೂಪಿಸಿದರು.











