22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಶಿಕ್ಷಕ ಶಶಿಧರ್ ಮಾತನಾಡಿ ವಿದ್ಯಾರ್ಥಿ ಸರ್ಕಾರದ ರಚನೆಯಿಂದ ಮಕ್ಕಳಿಗೆ ಜವಾಬ್ದಾರಿ ದೊರೆಯುತ್ತದೆ,ಶಾಲಾ ಮಕ್ಕಳ ಪ್ರತಿ ಮಗುವಿನ ಮೌಲ್ಯಮಾಪನಕ್ಕು ಶಾಲಾ ಸಂಸತ್ತು ಸಹಕರಿಯಾಗಲಿದೆ ಚುನಾವಣೆ ಅರಿವು ಮೂಡಿದಂತಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಶಿಧರ್ ರವರ ವತಿಯಿಂದ ಪ್ರತಿ ವರ್ಷದಲ್ಲಿ ಶಾಲೆಯ ಓರ್ವ ಪ್ರತಿಭಾವಂತ ಮಗುವಿಗೆ ಪ್ರತಿವರ್ಷದಂತೆ 1000 ರೂಪಾಯಿ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪ ಗೌಡ ರವರು ವಿದ್ಯಾರ್ಥಿ ಸರ್ಕಾರದಲ್ಲಿ ವಹಿಸಿಕೊಂಡ ಖಾತೆಗಳನ್ನು ಜವಾಬ್ದಾರಿಯಿಂದ ನಿರ್ವಹಣೆ ಮಾಡಬೇಕು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ವಿದ್ಯಾರ್ಥಿ ಸರಕಾರದ ಪಾತ್ರ ಅತ್ಯಂತ ಮುಖ್ಯವಾದದ್ದು ಎಂದು ತಿಳಿಸಿದರು. ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಶೀಲಾ ರವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು . ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ರವರು ಖಾತೆಗಳ ಜವಾಬ್ದಾರಿಯನ್ನು ತಿಳಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶಾಲಾ ಶಿಕ್ಷಕರದ ಗೌರಿಶ್ ರವರು ಧನ್ಯವಾದವಿತ್ತರು. ಶಾಲಾ ಶಿಕ್ಷಕಿಯಾದ ಪುಷ್ಪಲತಾ ನಿರೂಪಿಸಿದರು. ಶಾಲೆಯ ಶಿಕ್ಷಕರು ಸಹಕರಿಸಿದರು.

Related posts

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!