23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು: ಡೋಂಗ್ರೆ ಕುಟುಂಬಸ್ಥರಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ ಶೈಕ್ಷಣಿಕ ಪರಿಕರಗಳ 17 ನೇ ವರ್ಷದ ಉಚಿತ ವಿತರಣಾ ಸಮಾರಂಭ ಜೂ. 23 ರಂದು ನಾಲ್ಕೂರು ಗ್ರಾಮದ ಸೂಳಬೆಟ್ಟು ಸ.ಕಿ.ಪ್ರಾ.ಶಾಲೆಯಲ್ಲಿ ನಡೆಯಿತು.


ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘ( ಐ.ಡಿ.ಎ.)ದ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ರೋಟರಿ ನಿಯೋಜಿತ ಅಧ್ಯಕ್ಷ ಉಜಿರೆ ಎಸ್.ಡಿ.ಎಂ.ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಫ್ರೊ. ಪಿ.ಪಿ.ಪ್ರಭು ಉದ್ಘಾಟಿಸಿದರು.


ಐ.ಡಿ.ಎ.ಪುತ್ತೂರು ಘಟಕದ ಅಧ್ಯಕ್ಷೆ ಡಾl ಆಶಾ ಪಿದಮಲೆ, ಬೆಳ್ತಂಗಡಿ ಸ್ವಾತಿ ದಂತ ಚಿಕಿತ್ಸಾಲಯದ ಡಾl ಶಶಿಧರ ಡೋಂಗ್ರೆ, ಬಳಂಜ ಗ್ರಾ.ಪಂ.ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ , ಡಾl ರಾಘವೇಂದ್ರ ಪಿದಮಲೆ, ಗೀತಾಪ್ರಭು, ಡಾl ಸುಷ್ಮಾ ಡೋಂಗ್ರೆ , ಮೋಹನದಾಸ್ ಅಳದಂಗಡಿ ಉಪಸ್ಥಿತರಿದ್ದರು.


ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರವೀಣ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳು ಮಕ್ಕಳಿಗೆ ಸಮವಸ್ರ್ತ, ಪುಸ್ತಕ, ಚೀಲ, ಕೊಡೆ ಮತ್ತಿತರ ಪರಿಕರಗಳನ್ನು ವಿತರಿಸಿದರು.
ಈ ಬಾರಿಯ ಜೆ.ಇ.ಇ. (ಅಡ್ವಾನ್ಸ್) ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯುನ್ನತ ಸ್ಥಾನ ಪಡೆದು ಐ.ಐ.ಟಿ.ಗೆ ಆಯ್ಕೆಯಾದ ಅಳದಂಗಡಿಯ ಅಚಿಂತ್ಯ ದಾಸ್ ಅವರಿಗೆ ಮುಂದಿನ ವಿದ್ಯಾಭ್ಯಾಸದ ಸಲುವಾಗಿ ವಿದ್ಯಾನಿಧಿಯಾಗಿ ರೂ. 25,000 ನಗದನ್ನು ಡಾl ಶಶಿಧರ ಡೋಂಗ್ರೆ ಅವರು ಹಸ್ತಾಂತರಿಸಿದರು.


ಅಂಗನವಾಡಿ ಕಾರ್ಯಕರ್ತೆ ಶಶಿಕಲಾ, ಅಕ್ಷರ ದಾಸೋಹದ ಲವೀನಾ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ‌ ಮೋರಾಸ್ ಸ್ವಾಗತಿಸಿದರು. ಸಹ ಶಿಕ್ಷಕಿ ರೀಟಾ ರೋಡ್ರಿಗಸ್ ವಂದಿಸಿದರು. ಶಾಲಾ ಹಿರಿಯ ವಿದ್ಯಾರ್ಥಿ ದೀಪಕ ಆಠವಳೆ ಕಾರ್ಯಕ್ರಮ‌ ನಿರ್ವಹಿಸಿದರು.

Related posts

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya
error: Content is protected !!