23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ


ಅಳದಂಗಡಿ : ಇಲ್ಲಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ರೂ 9 ಲಕ್ಷ ಸಿಎಸ್ಆರ್ ಅನುದಾನದಿಂದ ನೀಡಿದ ಸುಸಜ್ಜಿತ ಭೌತಶಾಸ್ತ್ರ ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಪ್ರಯೋಗಾಲಯ ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ ಜೂ. 21 ರಂದು ನಡೆಯಿತು.

ಎಂಆರ್‌ಪಿಎಲ್ ಸಂಸ್ಥೆಯ ಇನ್ಫಾರ್ಮಶನ್ ಸೈನ್ಸ್ ವಿಭಾಗದ ಚೀಫ್ ಜನರಲ್ ಮ್ಯಾನೇಜರ್ ಅಳದಂಗಡಿ ಅರ್ವಗುತ್ತು ಶ್ರೀ ಶರತ್ ಬುಡಾಲೆ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ, ಉದ್ಘಾಟಿಸಿ, ವಿದ್ಯಾರ್ಥಿಗಳು ಸತತ ಪರಿಶ್ರಮ ಏಕಾಗ್ರತೆಯಿಂದ ಜ್ಞಾನ ಸಂಪಾದಿಸಿ ಸಮಾಜದಲ್ಲಿ ಉತ್ತಮ ಸಾಧಕರಾಗಬೇಕು ಪ್ರಯೋಗಾಲಯದ ಜ್ಞಾನವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಡೆದು ಇತರ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಬೇಕು ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಗ್ರಾ ಪಂ ಅಳದಂಗಡಿ ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಗ್ರಾ ಪಂ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಇಂಜಿನಿಯರ್ ಪ್ರತೀಕ್ ಶೆಟ್ಟಿ ನೊಚ್ಚ, ಪ್ರೌಢಶಾಲಾ ಹಿರಿಯ ಶಿಕ್ಷಕರಾದ ಚಂದ್ರಶೇಖರ್ ರಾವ್ ಉಪಸ್ಥಿತರಿದ್ದು ಶುಭ ಕೋರಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಸನ್ನಿ ಕೆ ಎಂ ವಹಿಸಿ ಎಂ ಆರ್‌ಪಿಎಲ್ ಸಂಸ್ಥೆಯ ಆಡಳಿತ ಮಂಡಳಿಗೆ ಕೃತಜ್ಞತೆಯನ್ನು ಸಲ್ಲಿಸಿ ಮುಂದೆಯೂ ಕಾಲೇಜಿನ ಅಭಿವೃದ್ಧಿಗೆ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಅನುದಾನ ಒದಗಿಸಲು ಕಾರಣೀಕರ್ತರಾದ ಚೀಫ್ ಜನರಲ್ ಮ್ಯಾನೇಜರ್ ಶರತ್ ಬುಡಾಲೆ ಹಾಗೂ ಸುಸಜ್ಜಿತ ಪ್ರಯೋಗಾಲಯವನ್ನು ನಾವಿನ್ಯ ರೂಪದಲ್ಲಿ ನಿರ್ಮಿಸಿದ ಇಂಜಿನಿಯರ್ ಪ್ರತೀಕ್ ಶೆಟ್ಟಿ ನೊಚ್ಚ ಇವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಅರ್ಥಶಾಸ್ತ್ರ ಉಪನ್ಯಾಸಕರಾದ ಹರೀಶ್ ರೈ ಸ್ವಾಗತಿಸಿದ ಕಾರ್ಯಕ್ರಮವನ್ನು ಜೀವಶಾಸ್ತ್ರ ಉಪನ್ಯಾಸಕರಾದ ಪ್ರಶಾಂತ್ ನಿರೂಪಿಸಿ, ಗಣಿತ ಉಪನ್ಯಾಸಕರಾದ ಸದಾನಂದ ಕುಲಾಲ್ ವಂದಿಸಿದರು. ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಉಪನ್ಯಾಸಕವೃಂದದವರು ಸಹಕಾರ ನೀಡಿದರು.

Related posts

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!