September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

ಕಕ್ಯಪದವು: ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ 2025 – 26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂ. 23ರಂದು ಚುನಾವಣೆಯನ್ನು ನಡೆಸಲಾಯಿತು.

ಎಲ್ಲಾ ವಿದ್ಯಾರ್ಥಿಗಳ ಮತದಾನ ಪ್ರಕ್ರಿಯೆಯು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ (EVM) ಯ ಮೂಲಕ ನೆರವೇರಿತು. ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಮತದಾನದ ಕಾರ್ಯ ಚಟುವಟಿಕೆಗಳನ್ನು ಆಧುನಿಕ ಮೊಬೈಲ್ ತಂತ್ರಜ್ಞಾನದ ಮೂಲಕ ಮಾಡಲಾಯಿತು. ವಿವಿಧ ಶಿಕ್ಷಕ ಸಿಬ್ಬಂದಿಗಳ ಸಹಕಾರದಿಂದ ಮತದಾನ ಪ್ರಕ್ರಿಯೆಯು ಶಿಸ್ತಿನಿಂದ ಮತ್ತು ಯಶಸ್ವಿಯಾಗಿ ಪೂರ್ಣಗೊಂಡಿತು. ಹಾಗೂ ಮತ ಎಣಿಕೆಯನ್ನು ಮಾಡಿ ಫಲಿತಾಂಶ ಘೋಷಣೆಯನ್ನು ಮಾಡಲಾಯಿತು.

ಶಾಲಾ ವಿದ್ಯಾರ್ಥಿ ಸಂಘದ ನಾಯಕಿಯಾಗಿ ಮನಸ್ವಿನಿ . ಕೆ, ಉಪನಾಯಕಿಯಾಗಿ ಅದಿತಿ ಎಂ. ಪ್ರಭು ಆಯ್ಕೆಯಾದರು. ಹಾಗೂ ಶಿಕ್ಷಣ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ ಮಂತ್ರಿಗಳನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಹಾಗೂ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂಬುದಾಗಿ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಕೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ವಿಜೇತರನ್ನು ಅಭಿನಂದಿಸಿದರು.

Related posts

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya
error: Content is protected !!