22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

ನಾರಾವಿ:”ವಿಶ್ವ ಪರಿಸರ ದಿನಾಚರಣೆಯೆಂದರೆ ಕೇವಲ ಗಿಡ ನೆಡುವ ಕಾರ್ಯಕ್ರಮವಲ್ಲ. ಈಗಿರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವುದೇ ಪರಿಸರ ದಿನದ ನಿಜವಾದ ಉದ್ದೇಶ. ಪರಿಸರವನ್ನು ಉಳಿಸದಿದ್ದರೆ ಮುಂದೊಂದು ದಿನ ಪರಿತಪಿಸಬೇಕಾದೀತು. ಪ್ಲಾಸ್ಟಿಕ್ ಮುಕ್ತ ಪರಿಸರ ಆರೋಗ್ಯಕ್ಕೆ ಸುಖಕರ”ಎಂದು ಸಂತ ಅಂತೋನಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ದಿನೇಶ್ ಬಿ ಕೆ ಬಳoಜ ಅಭಿಪ್ರಾಯ ಪಟ್ಟರು.

ಅವರು ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿ ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮ ದಲ್ಲಿ ಮಾತನಾಡುತ್ತಿದ್ದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವಂ. ಡಾ. ಆಲ್ವಿನ್ ಸೆರಾವೋ”ಗಿಡಮರಗಳಿಗೂ ಜೀವವಿರುತ್ತದೆ. ಅವುಗಳೂ ಉಸಿರಾಡುತ್ತದೆ. ನಾವು ಸ್ವಚ್ಛವಾಗಿ ಉಸಿರಾಡಬೇಕಾದರೆ ನಮ್ಮ ಪರಿಸರವು ಸ್ವಚ್ಛವಾಗಿರಬೇಕು.

ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು”ಎಂದು ತಿಳಿಸಿದರು. ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ಉಪ ಪ್ರಾoಶುಪಾಲರಾದ ಸಂತೋಷ್ ಸಲ್ದಾನ, ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರದೀಪ್ ಬಿ, ಹಾಗೂ ಕಾಲೇಜಿನ ವಿದ್ಯಾರ್ಥಿ ಪರಿಷತ್ ನ ನಾಯಕಿ ಕು.ಗ್ಲೆನಿಷಾ ಮಿರಾoದ ಉಪಸ್ಥಿತರಿದ್ದರು. ವಿದ್ಯಾರ್ಥಿಗನಿ ಹೆಂಝಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!