23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

ನಾರಾವಿ:”ವಿಶ್ವ ಪರಿಸರ ದಿನಾಚರಣೆಯೆಂದರೆ ಕೇವಲ ಗಿಡ ನೆಡುವ ಕಾರ್ಯಕ್ರಮವಲ್ಲ. ಈಗಿರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವುದೇ ಪರಿಸರ ದಿನದ ನಿಜವಾದ ಉದ್ದೇಶ. ಪರಿಸರವನ್ನು ಉಳಿಸದಿದ್ದರೆ ಮುಂದೊಂದು ದಿನ ಪರಿತಪಿಸಬೇಕಾದೀತು. ಪ್ಲಾಸ್ಟಿಕ್ ಮುಕ್ತ ಪರಿಸರ ಆರೋಗ್ಯಕ್ಕೆ ಸುಖಕರ”ಎಂದು ಸಂತ ಅಂತೋನಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ದಿನೇಶ್ ಬಿ ಕೆ ಬಳoಜ ಅಭಿಪ್ರಾಯ ಪಟ್ಟರು.

ಅವರು ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿ ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮ ದಲ್ಲಿ ಮಾತನಾಡುತ್ತಿದ್ದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವಂ. ಡಾ. ಆಲ್ವಿನ್ ಸೆರಾವೋ”ಗಿಡಮರಗಳಿಗೂ ಜೀವವಿರುತ್ತದೆ. ಅವುಗಳೂ ಉಸಿರಾಡುತ್ತದೆ. ನಾವು ಸ್ವಚ್ಛವಾಗಿ ಉಸಿರಾಡಬೇಕಾದರೆ ನಮ್ಮ ಪರಿಸರವು ಸ್ವಚ್ಛವಾಗಿರಬೇಕು.

ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು”ಎಂದು ತಿಳಿಸಿದರು. ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ಉಪ ಪ್ರಾoಶುಪಾಲರಾದ ಸಂತೋಷ್ ಸಲ್ದಾನ, ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರದೀಪ್ ಬಿ, ಹಾಗೂ ಕಾಲೇಜಿನ ವಿದ್ಯಾರ್ಥಿ ಪರಿಷತ್ ನ ನಾಯಕಿ ಕು.ಗ್ಲೆನಿಷಾ ಮಿರಾoದ ಉಪಸ್ಥಿತರಿದ್ದರು. ವಿದ್ಯಾರ್ಥಿಗನಿ ಹೆಂಝಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya
error: Content is protected !!