September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

ನಾರಾವಿ:”ವಿಶ್ವ ಪರಿಸರ ದಿನಾಚರಣೆಯೆಂದರೆ ಕೇವಲ ಗಿಡ ನೆಡುವ ಕಾರ್ಯಕ್ರಮವಲ್ಲ. ಈಗಿರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವುದೇ ಪರಿಸರ ದಿನದ ನಿಜವಾದ ಉದ್ದೇಶ. ಪರಿಸರವನ್ನು ಉಳಿಸದಿದ್ದರೆ ಮುಂದೊಂದು ದಿನ ಪರಿತಪಿಸಬೇಕಾದೀತು. ಪ್ಲಾಸ್ಟಿಕ್ ಮುಕ್ತ ಪರಿಸರ ಆರೋಗ್ಯಕ್ಕೆ ಸುಖಕರ”ಎಂದು ಸಂತ ಅಂತೋನಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ದಿನೇಶ್ ಬಿ ಕೆ ಬಳoಜ ಅಭಿಪ್ರಾಯ ಪಟ್ಟರು.

ಅವರು ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿ ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮ ದಲ್ಲಿ ಮಾತನಾಡುತ್ತಿದ್ದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವಂ. ಡಾ. ಆಲ್ವಿನ್ ಸೆರಾವೋ”ಗಿಡಮರಗಳಿಗೂ ಜೀವವಿರುತ್ತದೆ. ಅವುಗಳೂ ಉಸಿರಾಡುತ್ತದೆ. ನಾವು ಸ್ವಚ್ಛವಾಗಿ ಉಸಿರಾಡಬೇಕಾದರೆ ನಮ್ಮ ಪರಿಸರವು ಸ್ವಚ್ಛವಾಗಿರಬೇಕು.

ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು”ಎಂದು ತಿಳಿಸಿದರು. ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ಉಪ ಪ್ರಾoಶುಪಾಲರಾದ ಸಂತೋಷ್ ಸಲ್ದಾನ, ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರದೀಪ್ ಬಿ, ಹಾಗೂ ಕಾಲೇಜಿನ ವಿದ್ಯಾರ್ಥಿ ಪರಿಷತ್ ನ ನಾಯಕಿ ಕು.ಗ್ಲೆನಿಷಾ ಮಿರಾoದ ಉಪಸ್ಥಿತರಿದ್ದರು. ವಿದ್ಯಾರ್ಥಿಗನಿ ಹೆಂಝಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya
error: Content is protected !!