25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಶಿಕ್ಷಕ ಶಶಿಧರ್ ಮಾತನಾಡಿ ವಿದ್ಯಾರ್ಥಿ ಸರ್ಕಾರದ ರಚನೆಯಿಂದ ಮಕ್ಕಳಿಗೆ ಜವಾಬ್ದಾರಿ ದೊರೆಯುತ್ತದೆ,ಶಾಲಾ ಮಕ್ಕಳ ಪ್ರತಿ ಮಗುವಿನ ಮೌಲ್ಯಮಾಪನಕ್ಕು ಶಾಲಾ ಸಂಸತ್ತು ಸಹಕರಿಯಾಗಲಿದೆ ಚುನಾವಣೆ ಅರಿವು ಮೂಡಿದಂತಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಶಿಧರ್ ರವರ ವತಿಯಿಂದ ಪ್ರತಿ ವರ್ಷದಲ್ಲಿ ಶಾಲೆಯ ಓರ್ವ ಪ್ರತಿಭಾವಂತ ಮಗುವಿಗೆ ಪ್ರತಿವರ್ಷದಂತೆ 1000 ರೂಪಾಯಿ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪ ಗೌಡ ರವರು ವಿದ್ಯಾರ್ಥಿ ಸರ್ಕಾರದಲ್ಲಿ ವಹಿಸಿಕೊಂಡ ಖಾತೆಗಳನ್ನು ಜವಾಬ್ದಾರಿಯಿಂದ ನಿರ್ವಹಣೆ ಮಾಡಬೇಕು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ವಿದ್ಯಾರ್ಥಿ ಸರಕಾರದ ಪಾತ್ರ ಅತ್ಯಂತ ಮುಖ್ಯವಾದದ್ದು ಎಂದು ತಿಳಿಸಿದರು. ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಶೀಲಾ ರವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು . ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ರವರು ಖಾತೆಗಳ ಜವಾಬ್ದಾರಿಯನ್ನು ತಿಳಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶಾಲಾ ಶಿಕ್ಷಕರದ ಗೌರಿಶ್ ರವರು ಧನ್ಯವಾದವಿತ್ತರು. ಶಾಲಾ ಶಿಕ್ಷಕಿಯಾದ ಪುಷ್ಪಲತಾ ನಿರೂಪಿಸಿದರು. ಶಾಲೆಯ ಶಿಕ್ಷಕರು ಸಹಕರಿಸಿದರು.

Related posts

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya
error: Content is protected !!