September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

ಬೆಳ್ತಂಗಡಿ: ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.


ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ, ದೀಕ್ಷಿತ್ ಕೆ ಪೂಜಾರಿ ಉತ್ತಮ ನಟ, ಯುವ ಶೆಟ್ಟಿ ಉತ್ತಮ ಖಳ ನಟ, ಸಮರ್ಥನ್ ರಾವ್ ಉತ್ತಮ ಹಿನ್ನೆಲೆ ಸಂಗೀತ, ಉತ್ತಮ ಪೋಷಕ ನಟ ಮೋಹನ್ ಶೇಣಿ ಹೀಗೆ ಒಟ್ಟು 8 ಪ್ರಶಸ್ತಿಗಳನ್ನು ದಸ್ಕತ್ ಸಿನೆಮಾ ತಂಡ ಮುಡಿಗೇರಿಸಿದೆ.


ಈ ಸಿನೆಮಾ ತುಳುವಿನಲ್ಲಿ ಬಿಡುಗಡೆಗೊಂಡು ಉತ್ತಮ ಪ್ರತಿಕ್ರಿಯೆದೊಂದಿಗೆ ಇದೀಗ ಕನ್ನಡಕ್ಕೆ ಅನುವಾದಗೊಂಡು ಬಿಡುಗಡೆ ಗೊಂಡ ಮೊದಲ ತುಳು ಸಿನೆಮಾ ಅನ್ನೋ ಇತಿಹಾಸ ನಿರ್ಮಿಸಿದೆ.
ಈ ಸಿನೆಮಾಕ್ಕೆ ಇನ್ನಷ್ಟು ಪ್ರಶಸ್ತಿಗಳು ಲಭಿಸಲಿ ನಮ್ಮ ತುಳು ಸಿನೆಮಾಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅನ್ನೋದೇ ನಮ್ಮ ಆಶಯ.

Related posts

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ; ಶೇ. 15 ಡಿವಿಡೆಂಡ್ ಘೋಷಣೆ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya
error: Content is protected !!