September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

ಧರ್ಮಸ್ಥಳ : ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಗ್ರಾಮ ಪಂಚಾಯಿತಿ ರಸ್ತೆಗಳ ಬದಿಗಳಲ್ಲಿ ಅನಧಿಕೃತವಾಗಿ ಹಾಕಿರುವ ಬ್ಯಾನರ್, ಬಂಟಿಂಗ್ಸ್ ಜಾಹೀರಾತು ಫಲಕ, ಇತರ ನಾಮ ಫಲಕಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ರವರು ತೆರವುಗೊಳಿಸಿದರು.


ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಈ ಮೊದಲೇ ಗ್ರಾಮ ಪಂಚಾಯಿತಿಯಿಂದ ಪತ್ರಿಕಾ ಪ್ರಕಟಣೆ ಹಾಗೂ ಧ್ವನಿವರ್ಧಕಗಳ ಮೂಲಕ ಸೂಚನೆಯನ್ನು ನೀಡಲಾಗಿತ್ತು. ಸದ್ರಿ ಜಾಹೀರಾತು ಫಲಕಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಹಾಗೂ ಅನಧಿಕೃತ ವಸತಿ ಗ್ರಹಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬಂದಿದ್ದು. ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಲಾಯಿತು. ಈ ಹಿಂದೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಕಿರುವ ಅನಧಿಕೃತ ಗೂಡಂಗಡಿಗಳನ್ನು ಕೂಡ ತೆರವುಗೊಳಿಸಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಸಹಕಾರ ನೀಡಿದರು.


ಈ ಸಂದರ್ಭದಲ್ಲಿ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಿಬ್ಬಂದಿಗಳಾದ ದೇವಪ್ರಸಾದ್ ಬೊಲ್ಮ, ಶಿವಾನಂದ, ಗಜಾನನ, ವಂದನಾ, ಶೇಖರ, ಮಹಮ್ಮದ್ ಶಾಫಿ, ನಾಗರಾಜ, ಶೇಖರ ಗೌಡ, ದಿನೇಶ್, ಜಗನ್ನಾಥ, ಡಿ.ಎಸ್ ಬಾಬು, ಸುಲೇಮಾನ್, ವೀರಪ್ಪ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya
error: Content is protected !!