23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

ಧರ್ಮಸ್ಥಳ : ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಗ್ರಾಮ ಪಂಚಾಯಿತಿ ರಸ್ತೆಗಳ ಬದಿಗಳಲ್ಲಿ ಅನಧಿಕೃತವಾಗಿ ಹಾಕಿರುವ ಬ್ಯಾನರ್, ಬಂಟಿಂಗ್ಸ್ ಜಾಹೀರಾತು ಫಲಕ, ಇತರ ನಾಮ ಫಲಕಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ರವರು ತೆರವುಗೊಳಿಸಿದರು.


ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಈ ಮೊದಲೇ ಗ್ರಾಮ ಪಂಚಾಯಿತಿಯಿಂದ ಪತ್ರಿಕಾ ಪ್ರಕಟಣೆ ಹಾಗೂ ಧ್ವನಿವರ್ಧಕಗಳ ಮೂಲಕ ಸೂಚನೆಯನ್ನು ನೀಡಲಾಗಿತ್ತು. ಸದ್ರಿ ಜಾಹೀರಾತು ಫಲಕಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಹಾಗೂ ಅನಧಿಕೃತ ವಸತಿ ಗ್ರಹಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬಂದಿದ್ದು. ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಲಾಯಿತು. ಈ ಹಿಂದೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಕಿರುವ ಅನಧಿಕೃತ ಗೂಡಂಗಡಿಗಳನ್ನು ಕೂಡ ತೆರವುಗೊಳಿಸಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಸಹಕಾರ ನೀಡಿದರು.


ಈ ಸಂದರ್ಭದಲ್ಲಿ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಿಬ್ಬಂದಿಗಳಾದ ದೇವಪ್ರಸಾದ್ ಬೊಲ್ಮ, ಶಿವಾನಂದ, ಗಜಾನನ, ವಂದನಾ, ಶೇಖರ, ಮಹಮ್ಮದ್ ಶಾಫಿ, ನಾಗರಾಜ, ಶೇಖರ ಗೌಡ, ದಿನೇಶ್, ಜಗನ್ನಾಥ, ಡಿ.ಎಸ್ ಬಾಬು, ಸುಲೇಮಾನ್, ವೀರಪ್ಪ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya
error: Content is protected !!