September 6, 2026
ಆರೋಗ್ಯ

ಮಾದಕ ದ್ರವ್ಯ ವಿರೋಧಿ ದಿನಾಚರಣೆ


ಮೇಲ0ತಾಬೆಟ್ಟು :ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ರೋವರ್ಸ್- ರೇಂಜರ್ಸ್ ಘಟಕ, ಎನ್ ಸಿ ಸಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಾಗೂ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಯಿತು.

ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಶ್ರೀಯುತ ಬಿ.ಜಿ. ಸುಬ್ಬಾಪುರ ಮಠ ಜಾಗೃತಿ ಮೂಡಿಸಿದರು. ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ ಅಧ್ಯಕ್ಷತೆಯನ್ನು ವಹಿಸಿ ಮಾದಕ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವವಾಗಿದೆ ಎಂದು ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಯಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ ಸ್ವಾಗತಿಸಿ, ಯುವರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ. ರವಿ. ಎಂ.ಎನ್., ವಂದಿಸಿದರು. ಎನ್‌ಸಿಸಿ ಸಂಯೋಜಕರಾದ ಪ್ರೊ. ಸುಧಾರಾಣಿ, ಪೊಲೀಸ್ ಸಿಬ್ಬಂದಿಗಳಾದ ಶ್ರೀಮತಿ ಶ್ವೇತಾ, ಶ್ರೀ ವಿಶ್ವನಾಥ್, ಶ್ರೀ ಜಗದೀಶ, ಶ್ರೀ ಹನುಮಂತ ಹಾಗೂ ಕಾಲೇಜಿನ ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಪಣಕಜೆ ಸಬರಬೈಲು ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ನಶಮುಕ್ತ ಭಾರತ ಅಭಿಯಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ.

Suddi Udaya
error: Content is protected !!