23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

ಕಳೆಂಜ: ಇಲ್ಲಿಯ ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಮಹಿಳಾ ಮೀಸಲು ಸ್ಥಾನಕ್ಕೆ ಮೀಸಲಿರಿಸಿದ ಸ್ಥಾನದಿಂದ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ೧೧ ಜನ ಸಹಕಾರ ಭಾರತಿ ಅಭ್ಯರ್ಥಿಗಳು ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.


ನಿರ್ದೇಶಕರಾಗಿ ರತ್ನಾಕರ ಗೌಡ ಗುತ್ತು (ಸಾಮಾನ್ಯ), ಸುಬ್ರಾಯ ಗೌಡ ಕೊಡಂಗೆ (ಸಾಮಾನ್ಯ), ಆನಂದ ಗೌಡ ಭಂಡಾರಿಮಜಲು (ಸಾಮಾನ್ಯ), ನಾರಾಯಣ ಗೌಡ ಪಲ್ಲದಂಗಡಿ (ಸಾಮಾನ್ಯ), ಹರೀಶ್ ರಾವ್ ಕಾಯಡ (ಸಾಮಾನ್ಯ), ಚಂದ್ರಶೇಖರ ಗೌಡ ಪಿಲ್ಯಡ್ಕ (ಸಾಮಾನ್ಯ), ಶಶಿಕಲಾ ಧನಂಜಯ ಗೌಡ (ಸಾಮಾನ್ಯ), ಸುಂದರ ಪೂಜಾರಿ (ಹಿಂದುಳಿದ ವರ್ಗ ಎ ಪ್ರವರ್ಗ), ಮೋಹನ ಗೌಡ ಬದಿಮಾರ್ (ಹಿಂದುಳಿದ ವರ್ಗ ಬಿ ಪ್ರವರ್ಗ), ದೇವಕಿ ಪದ್ಮನಾಭ ಗೌಡ ಬೀಜದಡಿ (ಮಹಿಳಾ ಮೀಸಲು), ಭಾರತಿ ಧರ್ಣಪ್ಪ ಗೌಡ ವಳಂಬಲ (ಮಹಿಳಾ ಮೀಸಲಾತಿ) ಆಯ್ಕೆಯಾಗಿದ್ದಾರೆ.


ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಜೂ. 27ಕ್ಕೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ. ನಡೆಸಿದರು. ಕಾರ್ಯದರ್ಶಿ ಸುಶಾಂತ್ ಸಹಕರಿಸಿದರು.

Related posts

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!