July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

ಬಂಗಾಡಿ: ಬಂಗಾಡಿ ಜೈನ ಬಸದಿ ಎದುರು ಜೂ.25 ರಂದು ಅತಿಯಾದ ಮಳೆಯಿಂದಾಗಿ ಚರಂಡಿ ನಿರ್ವಹಣೆ ಇಲ್ಲದೆ ರಸ್ತೆಯಲ್ಲೇ ಮಳೆಯ ನೀರು ಹರಿದಿದೆ.


ಇಲ್ಲಿ ಇರುವ ಚರಂಡಿ ಅತೀ ಸಣ್ಣದು ಪ್ರತೀ ವರ್ಷ ಇಲ್ಲಿ ಮಳೆ ಬಂದರೆ ನೀರೆಲ್ಲಾ ಚರಂಡಿ ಇಲ್ಲದೆ ಮಾರ್ಗದಲ್ಲೇ ಹರಿಯುತ್ತದೆ. ಇದರಲ್ಲಿ ಬರುವ ನೀರು 10ಪಟ್ಟು ಹೆಚ್ಚು ಇದೆ. ಇಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಜೈನ ಬಸದಿ, ಸಿ.ಎ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಖಾಸಗಿ ಕ್ಲಿನಿಕ್ ಇದೆ. ನೀರು ತುಂಬಿ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ , ಶಾಲಾ ಮಕ್ಕಳಿಗೆ ಕಷ್ಟವಾಗುತ್ತಿದೆ. ಪ್ರತೀ ವರ್ಷ ಮಳೆ ಬಂದರೆ ಇದೇ ಪರಿಸ್ಥಿತಿ. ಇದರ ಬಗ್ಗೆ ಲೋಕೋಪಯೋಗಿ ಇಲಾಖೆ ಮತ್ತು ಇತರ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕಾಗಿದೆ. ಎರಡೂ ಬದಿಯಲ್ಲಿ ಚರಂಡಿ ಇಲ್ಲದೆ ಈ ಪರಿಸ್ಥಿತಿ ಉಂಟಾಗಿದೆ. ಕಳೆದ ಹಲವು ವರ್ಷಗಳಿಂದ ಇದೇ ಅವಸ್ಥೆ ಉಂಟಾಗುತ್ತಿದ್ದು, ಇನ್ನಾದರೂ ಎಚ್ಚೆತ್ತು ಸರಿಪಡಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ. ಮುಂದೆಯೂ ಇದೇ ಮುಂದುವರಿದರೆ ಸಾರ್ವಜನಿಕರು ಪ್ರತಿಭಟನೆ ಮಾಡಬೇಕಾಗಿದೆ ಎಂದು ಆಗ್ರಹಿಸಿದರು.

Related posts

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya
error: Content is protected !!