24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಪೇರದ್ದಪಲ್ಕೆ ಹಾನಿಬೆಟ್ಟು ಸರ್ವೇ ನಂಬರ್೨೩೪/*/ ರಲ್ಲಿರುವ ಸ್ಥಳವನ್ನು ಸಾರ್ವಜನಿಕ ಉದ್ದೇಶಕ್ಕೆ ಪಂಚಾಯತದಿಂದ ಮೀಸಲಿರಿಸಲು ಸೂಕ್ತ ಸ್ಥಳವೆಂದು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಿ, ತಹಶೀಲ್ದಾರರಿಗೆ ನೀಡಿದ ಮನವಿಯಂತೆ ಬೆಳ್ತಂಗಡಿ ತಹಶೀಲ್ದಾರ್‌ರವರು ಆದೇಶ ಸಂಖ್ಯೆ ಓಅಖಅಖ ೧೮೧/೨೦೨೩.೨೪ ರಂತೆ ಅತಿಕ್ರಮಣವನ್ನು ತೆರವುಗೊಳಿಸಿ ಸರ್ಕಾರದ ಸ್ವಾಧೀನಕ್ಕೆ ಕಂದಾಯ ಇಲಾಖೆ ಜೂ.೪ರಂದು ಪಡೆದುಕೊಂಡಿದ್ದರು.

ಇದೀಗ ತಹಶೀಲ್ದಾರ್ ಅತಿಕ್ರಮಣ ತೆರವಿಗೆ ಮಾಡಿದ ಸಂಪೂರ್ಣ ಪ್ರಕ್ರಿಯೆನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸಾಜು ಚಾಕೋ ಎಂ. ಅವರಿಗೆ ಜಾಗ ಮಾರಾಟ ಮಾಡಿದವರು ಸದ್ರಿ ಸರಕಾರಿ ಸ್ಥಳಕ್ಕೆ ಬೇಲಿ ಹಾಕಿ ಸುಮಾರ ೫೦ ವರ್ಷಗಳಿಂದ ಸ್ವಾಧೀನ ಹೊಂದಿ ಅದರಲ್ಲಿದ್ದ ೪೫ ವರ್ಷದ ರಬ್ಬರ್ ಗಿಡಗಳನ್ನು ಕಡಿದು ಅದರಲ್ಲಿ ತೆಂಗು ಹಾಗೂ ಇತರ ಕೃಷಿಯನ್ನು ಮಾಡಿಕೊಂಡು ಬರುತ್ತಿದ್ದರು.

ಸದ್ರಿ ಸ್ಥಳವು ಚಾಕೋ ಅವರ ಕ್ರಮವರಿಸಿದ ಸ್ಥಳಗಳ ಹಕ್ಕಿನ ಸ್ಥಳಗಳಾಗಿದ್ದು, ಅವುಗಳನ್ನು ಈಗಲೂ ಸ್ವಾಧೀನ ಹೊಂದಿದ್ದಾರೆ. ಅವರಿಗೆ ಸರಿಯಾದ ಅವಕಾಶ ನೀಡದೆ ಜೂ.೬ರಂದು ಅತಿಕ್ರಮ ತೆರವಿಗೆ ಕ್ರಮ ಜರುಗಿಸುವುದಾಗಿ ತಹಶೀಲ್ದಾರರು ಜೂ.೪ರಂದು ನೋಟಿಸ್ ಜಾರಿಗೊಳಿಸಿ ಅದರಂತೆ ಕಾನೂನು ಕಾರ್ಯಚರಣೆ ನಡೆಸಿದರು ಎಂದು ಸಾಜು ಎಂ.ಚಾಕೋರವರು ಕರ್ನಾಟಕ ಉಚ್ಚಾ ನ್ಯಾಯಲಯದಲ್ಲಿ ಮೇಲ್ಮನವಿ ಸಲ್ಲಿಸಿ, ಅತಿಕ್ರಮ ತೆರವುಗೊಳಿಸುವ ತಹಶೀಲ್ದಾರ್ ಕ್ರಮವನ್ನು ರದ್ದುಗೊಳಿಸುವಂತೆ ಕೋರಿದ್ದರು. ಸದ್ರಿ ಪ್ರಕರಣ ಸಹಾಯಕ ಕಮೀಷನರ್‌ರ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದು, ಚಾಕೋರವರು ಆಕ್ಷೇಪಣೆಯನ್ನು ಸಲ್ಲಿಸಿದ್ದಾರೆ.

ಈ ಆಕ್ಷೇಪಣೆ ವಿಲೇವಾರಿಯಾಗದೆ ತಹಶೀಲ್ದಾರರು ಅತಿಕ್ರಮಣ ತೆರವಿಗೆ ಕೈಗೊಂಡಿರುವ ಕ್ರಮವು ಸಮ0ಜಸವಲ್ಲವೆಂದು ಮನಗಂಡ ಹೈಕೋರ್ಟ್ ತಹಶೀಲ್ದಾರ್ ರವರ ಅತಿಕ್ರಮಣ ತೆರವಿನ ಸಂಪೂರ್ಣ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ. ಚಾಕೋ ಪರವಾಗಿ ನ್ಯಾಯಾಲಯದಲ್ಲಿ ನ್ಯಾಯವಾದಿ ಎಸ್. ರಾಜಶೇಖರ್ ಮತ್ತು ನ್ಯಾಯವಾದಿ ಪ್ರಸಾದ್ ಕೆ.ಎಸ್ ಬೆಳ್ತಂಗಡಿ ವಾದಿಸಿದ್ದರು.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya
error: Content is protected !!