37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

ಧರ್ಮಸ್ಥಳ : ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಗ್ರಾಮ ಪಂಚಾಯಿತಿ ರಸ್ತೆಗಳ ಬದಿಗಳಲ್ಲಿ ಅನಧಿಕೃತವಾಗಿ ಹಾಕಿರುವ ಬ್ಯಾನರ್, ಬಂಟಿಂಗ್ಸ್ ಜಾಹೀರಾತು ಫಲಕ, ಇತರ ನಾಮ ಫಲಕಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ರವರು ತೆರವುಗೊಳಿಸಿದರು.


ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಈ ಮೊದಲೇ ಗ್ರಾಮ ಪಂಚಾಯಿತಿಯಿಂದ ಪತ್ರಿಕಾ ಪ್ರಕಟಣೆ ಹಾಗೂ ಧ್ವನಿವರ್ಧಕಗಳ ಮೂಲಕ ಸೂಚನೆಯನ್ನು ನೀಡಲಾಗಿತ್ತು. ಸದ್ರಿ ಜಾಹೀರಾತು ಫಲಕಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಹಾಗೂ ಅನಧಿಕೃತ ವಸತಿ ಗ್ರಹಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬಂದಿದ್ದು. ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಲಾಯಿತು. ಈ ಹಿಂದೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಕಿರುವ ಅನಧಿಕೃತ ಗೂಡಂಗಡಿಗಳನ್ನು ಕೂಡ ತೆರವುಗೊಳಿಸಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಸಹಕಾರ ನೀಡಿದರು.


ಈ ಸಂದರ್ಭದಲ್ಲಿ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಿಬ್ಬಂದಿಗಳಾದ ದೇವಪ್ರಸಾದ್ ಬೊಲ್ಮ, ಶಿವಾನಂದ, ಗಜಾನನ, ವಂದನಾ, ಶೇಖರ, ಮಹಮ್ಮದ್ ಶಾಫಿ, ನಾಗರಾಜ, ಶೇಖರ ಗೌಡ, ದಿನೇಶ್, ಜಗನ್ನಾಥ, ಡಿ.ಎಸ್ ಬಾಬು, ಸುಲೇಮಾನ್, ವೀರಪ್ಪ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya
error: Content is protected !!