23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

ಧರ್ಮಸ್ಥಳ : ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಗ್ರಾಮ ಪಂಚಾಯಿತಿ ರಸ್ತೆಗಳ ಬದಿಗಳಲ್ಲಿ ಅನಧಿಕೃತವಾಗಿ ಹಾಕಿರುವ ಬ್ಯಾನರ್, ಬಂಟಿಂಗ್ಸ್ ಜಾಹೀರಾತು ಫಲಕ, ಇತರ ನಾಮ ಫಲಕಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ರವರು ತೆರವುಗೊಳಿಸಿದರು.


ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಈ ಮೊದಲೇ ಗ್ರಾಮ ಪಂಚಾಯಿತಿಯಿಂದ ಪತ್ರಿಕಾ ಪ್ರಕಟಣೆ ಹಾಗೂ ಧ್ವನಿವರ್ಧಕಗಳ ಮೂಲಕ ಸೂಚನೆಯನ್ನು ನೀಡಲಾಗಿತ್ತು. ಸದ್ರಿ ಜಾಹೀರಾತು ಫಲಕಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಹಾಗೂ ಅನಧಿಕೃತ ವಸತಿ ಗ್ರಹಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬಂದಿದ್ದು. ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಲಾಯಿತು. ಈ ಹಿಂದೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಕಿರುವ ಅನಧಿಕೃತ ಗೂಡಂಗಡಿಗಳನ್ನು ಕೂಡ ತೆರವುಗೊಳಿಸಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಸಹಕಾರ ನೀಡಿದರು.


ಈ ಸಂದರ್ಭದಲ್ಲಿ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಿಬ್ಬಂದಿಗಳಾದ ದೇವಪ್ರಸಾದ್ ಬೊಲ್ಮ, ಶಿವಾನಂದ, ಗಜಾನನ, ವಂದನಾ, ಶೇಖರ, ಮಹಮ್ಮದ್ ಶಾಫಿ, ನಾಗರಾಜ, ಶೇಖರ ಗೌಡ, ದಿನೇಶ್, ಜಗನ್ನಾಥ, ಡಿ.ಎಸ್ ಬಾಬು, ಸುಲೇಮಾನ್, ವೀರಪ್ಪ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya
error: Content is protected !!