24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

ಧರ್ಮಸ್ಥಳ : ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಗ್ರಾಮ ಪಂಚಾಯಿತಿ ರಸ್ತೆಗಳ ಬದಿಗಳಲ್ಲಿ ಅನಧಿಕೃತವಾಗಿ ಹಾಕಿರುವ ಬ್ಯಾನರ್, ಬಂಟಿಂಗ್ಸ್ ಜಾಹೀರಾತು ಫಲಕ, ಇತರ ನಾಮ ಫಲಕಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ರವರು ತೆರವುಗೊಳಿಸಿದರು.


ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಈ ಮೊದಲೇ ಗ್ರಾಮ ಪಂಚಾಯಿತಿಯಿಂದ ಪತ್ರಿಕಾ ಪ್ರಕಟಣೆ ಹಾಗೂ ಧ್ವನಿವರ್ಧಕಗಳ ಮೂಲಕ ಸೂಚನೆಯನ್ನು ನೀಡಲಾಗಿತ್ತು. ಸದ್ರಿ ಜಾಹೀರಾತು ಫಲಕಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಹಾಗೂ ಅನಧಿಕೃತ ವಸತಿ ಗ್ರಹಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬಂದಿದ್ದು. ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಲಾಯಿತು. ಈ ಹಿಂದೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಕಿರುವ ಅನಧಿಕೃತ ಗೂಡಂಗಡಿಗಳನ್ನು ಕೂಡ ತೆರವುಗೊಳಿಸಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಸಹಕಾರ ನೀಡಿದರು.


ಈ ಸಂದರ್ಭದಲ್ಲಿ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಿಬ್ಬಂದಿಗಳಾದ ದೇವಪ್ರಸಾದ್ ಬೊಲ್ಮ, ಶಿವಾನಂದ, ಗಜಾನನ, ವಂದನಾ, ಶೇಖರ, ಮಹಮ್ಮದ್ ಶಾಫಿ, ನಾಗರಾಜ, ಶೇಖರ ಗೌಡ, ದಿನೇಶ್, ಜಗನ್ನಾಥ, ಡಿ.ಎಸ್ ಬಾಬು, ಸುಲೇಮಾನ್, ವೀರಪ್ಪ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya

ಶಿಶಿಲ: ಅಡ್ಡಹಳ್ಳ ನಿವಾಸಿ ಡೀಕಯ್ಯ ಗೌಡ ರವರ ಮನೆ ಮೇಲೆ ಮರ ಬಿದ್ದು ಹಾನಿ

Suddi Udaya

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ಪದ್ಮುಂಜ ಪ್ಯಾಕ್ಸ್ ಮಹಾಸಭೆ ರೂ. 433.23 ಕೋಟಿ ವ್ಯವಹಾರ, ರೂ.2.17 ಕೋಟಿ ನಿವ್ವಳ ಲಾಭ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya
error: Content is protected !!