25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

ಬಂಗಾಡಿ: ಬಂಗಾಡಿ ಜೈನ ಬಸದಿ ಎದುರು ಜೂ.25 ರಂದು ಅತಿಯಾದ ಮಳೆಯಿಂದಾಗಿ ಚರಂಡಿ ನಿರ್ವಹಣೆ ಇಲ್ಲದೆ ರಸ್ತೆಯಲ್ಲೇ ಮಳೆಯ ನೀರು ಹರಿದಿದೆ.


ಇಲ್ಲಿ ಇರುವ ಚರಂಡಿ ಅತೀ ಸಣ್ಣದು ಪ್ರತೀ ವರ್ಷ ಇಲ್ಲಿ ಮಳೆ ಬಂದರೆ ನೀರೆಲ್ಲಾ ಚರಂಡಿ ಇಲ್ಲದೆ ಮಾರ್ಗದಲ್ಲೇ ಹರಿಯುತ್ತದೆ. ಇದರಲ್ಲಿ ಬರುವ ನೀರು 10ಪಟ್ಟು ಹೆಚ್ಚು ಇದೆ. ಇಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಜೈನ ಬಸದಿ, ಸಿ.ಎ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಖಾಸಗಿ ಕ್ಲಿನಿಕ್ ಇದೆ. ನೀರು ತುಂಬಿ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ , ಶಾಲಾ ಮಕ್ಕಳಿಗೆ ಕಷ್ಟವಾಗುತ್ತಿದೆ. ಪ್ರತೀ ವರ್ಷ ಮಳೆ ಬಂದರೆ ಇದೇ ಪರಿಸ್ಥಿತಿ. ಇದರ ಬಗ್ಗೆ ಲೋಕೋಪಯೋಗಿ ಇಲಾಖೆ ಮತ್ತು ಇತರ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕಾಗಿದೆ. ಎರಡೂ ಬದಿಯಲ್ಲಿ ಚರಂಡಿ ಇಲ್ಲದೆ ಈ ಪರಿಸ್ಥಿತಿ ಉಂಟಾಗಿದೆ. ಕಳೆದ ಹಲವು ವರ್ಷಗಳಿಂದ ಇದೇ ಅವಸ್ಥೆ ಉಂಟಾಗುತ್ತಿದ್ದು, ಇನ್ನಾದರೂ ಎಚ್ಚೆತ್ತು ಸರಿಪಡಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ. ಮುಂದೆಯೂ ಇದೇ ಮುಂದುವರಿದರೆ ಸಾರ್ವಜನಿಕರು ಪ್ರತಿಭಟನೆ ಮಾಡಬೇಕಾಗಿದೆ ಎಂದು ಆಗ್ರಹಿಸಿದರು.

Related posts

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!