September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

ಬಂಗಾಡಿ: ಬಂಗಾಡಿ ಜೈನ ಬಸದಿ ಎದುರು ಜೂ.25 ರಂದು ಅತಿಯಾದ ಮಳೆಯಿಂದಾಗಿ ಚರಂಡಿ ನಿರ್ವಹಣೆ ಇಲ್ಲದೆ ರಸ್ತೆಯಲ್ಲೇ ಮಳೆಯ ನೀರು ಹರಿದಿದೆ.


ಇಲ್ಲಿ ಇರುವ ಚರಂಡಿ ಅತೀ ಸಣ್ಣದು ಪ್ರತೀ ವರ್ಷ ಇಲ್ಲಿ ಮಳೆ ಬಂದರೆ ನೀರೆಲ್ಲಾ ಚರಂಡಿ ಇಲ್ಲದೆ ಮಾರ್ಗದಲ್ಲೇ ಹರಿಯುತ್ತದೆ. ಇದರಲ್ಲಿ ಬರುವ ನೀರು 10ಪಟ್ಟು ಹೆಚ್ಚು ಇದೆ. ಇಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಜೈನ ಬಸದಿ, ಸಿ.ಎ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಖಾಸಗಿ ಕ್ಲಿನಿಕ್ ಇದೆ. ನೀರು ತುಂಬಿ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ , ಶಾಲಾ ಮಕ್ಕಳಿಗೆ ಕಷ್ಟವಾಗುತ್ತಿದೆ. ಪ್ರತೀ ವರ್ಷ ಮಳೆ ಬಂದರೆ ಇದೇ ಪರಿಸ್ಥಿತಿ. ಇದರ ಬಗ್ಗೆ ಲೋಕೋಪಯೋಗಿ ಇಲಾಖೆ ಮತ್ತು ಇತರ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕಾಗಿದೆ. ಎರಡೂ ಬದಿಯಲ್ಲಿ ಚರಂಡಿ ಇಲ್ಲದೆ ಈ ಪರಿಸ್ಥಿತಿ ಉಂಟಾಗಿದೆ. ಕಳೆದ ಹಲವು ವರ್ಷಗಳಿಂದ ಇದೇ ಅವಸ್ಥೆ ಉಂಟಾಗುತ್ತಿದ್ದು, ಇನ್ನಾದರೂ ಎಚ್ಚೆತ್ತು ಸರಿಪಡಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ. ಮುಂದೆಯೂ ಇದೇ ಮುಂದುವರಿದರೆ ಸಾರ್ವಜನಿಕರು ಪ್ರತಿಭಟನೆ ಮಾಡಬೇಕಾಗಿದೆ ಎಂದು ಆಗ್ರಹಿಸಿದರು.

Related posts

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯೋತ್ಸವ

Suddi Udaya

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya
error: Content is protected !!