July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

ಬೆಳ್ತಂಗಡಿ: ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.


ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ, ದೀಕ್ಷಿತ್ ಕೆ ಪೂಜಾರಿ ಉತ್ತಮ ನಟ, ಯುವ ಶೆಟ್ಟಿ ಉತ್ತಮ ಖಳ ನಟ, ಸಮರ್ಥನ್ ರಾವ್ ಉತ್ತಮ ಹಿನ್ನೆಲೆ ಸಂಗೀತ, ಉತ್ತಮ ಪೋಷಕ ನಟ ಮೋಹನ್ ಶೇಣಿ ಹೀಗೆ ಒಟ್ಟು 8 ಪ್ರಶಸ್ತಿಗಳನ್ನು ದಸ್ಕತ್ ಸಿನೆಮಾ ತಂಡ ಮುಡಿಗೇರಿಸಿದೆ.


ಈ ಸಿನೆಮಾ ತುಳುವಿನಲ್ಲಿ ಬಿಡುಗಡೆಗೊಂಡು ಉತ್ತಮ ಪ್ರತಿಕ್ರಿಯೆದೊಂದಿಗೆ ಇದೀಗ ಕನ್ನಡಕ್ಕೆ ಅನುವಾದಗೊಂಡು ಬಿಡುಗಡೆ ಗೊಂಡ ಮೊದಲ ತುಳು ಸಿನೆಮಾ ಅನ್ನೋ ಇತಿಹಾಸ ನಿರ್ಮಿಸಿದೆ.
ಈ ಸಿನೆಮಾಕ್ಕೆ ಇನ್ನಷ್ಟು ಪ್ರಶಸ್ತಿಗಳು ಲಭಿಸಲಿ ನಮ್ಮ ತುಳು ಸಿನೆಮಾಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅನ್ನೋದೇ ನಮ್ಮ ಆಶಯ.

Related posts

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya
error: Content is protected !!