September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

ಧರ್ಮಸ್ಥಳ : ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಗ್ರಾಮ ಪಂಚಾಯಿತಿ ರಸ್ತೆಗಳ ಬದಿಗಳಲ್ಲಿ ಅನಧಿಕೃತವಾಗಿ ಹಾಕಿರುವ ಬ್ಯಾನರ್, ಬಂಟಿಂಗ್ಸ್ ಜಾಹೀರಾತು ಫಲಕ, ಇತರ ನಾಮ ಫಲಕಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ರವರು ತೆರವುಗೊಳಿಸಿದರು.


ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಈ ಮೊದಲೇ ಗ್ರಾಮ ಪಂಚಾಯಿತಿಯಿಂದ ಪತ್ರಿಕಾ ಪ್ರಕಟಣೆ ಹಾಗೂ ಧ್ವನಿವರ್ಧಕಗಳ ಮೂಲಕ ಸೂಚನೆಯನ್ನು ನೀಡಲಾಗಿತ್ತು. ಸದ್ರಿ ಜಾಹೀರಾತು ಫಲಕಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಹಾಗೂ ಅನಧಿಕೃತ ವಸತಿ ಗ್ರಹಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬಂದಿದ್ದು. ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಲಾಯಿತು. ಈ ಹಿಂದೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಕಿರುವ ಅನಧಿಕೃತ ಗೂಡಂಗಡಿಗಳನ್ನು ಕೂಡ ತೆರವುಗೊಳಿಸಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಸಹಕಾರ ನೀಡಿದರು.


ಈ ಸಂದರ್ಭದಲ್ಲಿ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಿಬ್ಬಂದಿಗಳಾದ ದೇವಪ್ರಸಾದ್ ಬೊಲ್ಮ, ಶಿವಾನಂದ, ಗಜಾನನ, ವಂದನಾ, ಶೇಖರ, ಮಹಮ್ಮದ್ ಶಾಫಿ, ನಾಗರಾಜ, ಶೇಖರ ಗೌಡ, ದಿನೇಶ್, ಜಗನ್ನಾಥ, ಡಿ.ಎಸ್ ಬಾಬು, ಸುಲೇಮಾನ್, ವೀರಪ್ಪ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!