25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

ಧರ್ಮಸ್ಥಳ : ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಗ್ರಾಮ ಪಂಚಾಯಿತಿ ರಸ್ತೆಗಳ ಬದಿಗಳಲ್ಲಿ ಅನಧಿಕೃತವಾಗಿ ಹಾಕಿರುವ ಬ್ಯಾನರ್, ಬಂಟಿಂಗ್ಸ್ ಜಾಹೀರಾತು ಫಲಕ, ಇತರ ನಾಮ ಫಲಕಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ರವರು ತೆರವುಗೊಳಿಸಿದರು.


ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಈ ಮೊದಲೇ ಗ್ರಾಮ ಪಂಚಾಯಿತಿಯಿಂದ ಪತ್ರಿಕಾ ಪ್ರಕಟಣೆ ಹಾಗೂ ಧ್ವನಿವರ್ಧಕಗಳ ಮೂಲಕ ಸೂಚನೆಯನ್ನು ನೀಡಲಾಗಿತ್ತು. ಸದ್ರಿ ಜಾಹೀರಾತು ಫಲಕಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಹಾಗೂ ಅನಧಿಕೃತ ವಸತಿ ಗ್ರಹಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬಂದಿದ್ದು. ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಲಾಯಿತು. ಈ ಹಿಂದೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಕಿರುವ ಅನಧಿಕೃತ ಗೂಡಂಗಡಿಗಳನ್ನು ಕೂಡ ತೆರವುಗೊಳಿಸಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಸಹಕಾರ ನೀಡಿದರು.


ಈ ಸಂದರ್ಭದಲ್ಲಿ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಿಬ್ಬಂದಿಗಳಾದ ದೇವಪ್ರಸಾದ್ ಬೊಲ್ಮ, ಶಿವಾನಂದ, ಗಜಾನನ, ವಂದನಾ, ಶೇಖರ, ಮಹಮ್ಮದ್ ಶಾಫಿ, ನಾಗರಾಜ, ಶೇಖರ ಗೌಡ, ದಿನೇಶ್, ಜಗನ್ನಾಥ, ಡಿ.ಎಸ್ ಬಾಬು, ಸುಲೇಮಾನ್, ವೀರಪ್ಪ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya
error: Content is protected !!