25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

ಕಳೆಂಜ: ಇಲ್ಲಿಯ ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಮಹಿಳಾ ಮೀಸಲು ಸ್ಥಾನಕ್ಕೆ ಮೀಸಲಿರಿಸಿದ ಸ್ಥಾನದಿಂದ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ೧೧ ಜನ ಸಹಕಾರ ಭಾರತಿ ಅಭ್ಯರ್ಥಿಗಳು ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.


ನಿರ್ದೇಶಕರಾಗಿ ರತ್ನಾಕರ ಗೌಡ ಗುತ್ತು (ಸಾಮಾನ್ಯ), ಸುಬ್ರಾಯ ಗೌಡ ಕೊಡಂಗೆ (ಸಾಮಾನ್ಯ), ಆನಂದ ಗೌಡ ಭಂಡಾರಿಮಜಲು (ಸಾಮಾನ್ಯ), ನಾರಾಯಣ ಗೌಡ ಪಲ್ಲದಂಗಡಿ (ಸಾಮಾನ್ಯ), ಹರೀಶ್ ರಾವ್ ಕಾಯಡ (ಸಾಮಾನ್ಯ), ಚಂದ್ರಶೇಖರ ಗೌಡ ಪಿಲ್ಯಡ್ಕ (ಸಾಮಾನ್ಯ), ಶಶಿಕಲಾ ಧನಂಜಯ ಗೌಡ (ಸಾಮಾನ್ಯ), ಸುಂದರ ಪೂಜಾರಿ (ಹಿಂದುಳಿದ ವರ್ಗ ಎ ಪ್ರವರ್ಗ), ಮೋಹನ ಗೌಡ ಬದಿಮಾರ್ (ಹಿಂದುಳಿದ ವರ್ಗ ಬಿ ಪ್ರವರ್ಗ), ದೇವಕಿ ಪದ್ಮನಾಭ ಗೌಡ ಬೀಜದಡಿ (ಮಹಿಳಾ ಮೀಸಲು), ಭಾರತಿ ಧರ್ಣಪ್ಪ ಗೌಡ ವಳಂಬಲ (ಮಹಿಳಾ ಮೀಸಲಾತಿ) ಆಯ್ಕೆಯಾಗಿದ್ದಾರೆ.


ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಜೂ. 27ಕ್ಕೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ. ನಡೆಸಿದರು. ಕಾರ್ಯದರ್ಶಿ ಸುಶಾಂತ್ ಸಹಕರಿಸಿದರು.

Related posts

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಮಾ.22: ಉಜಿರೆಯಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!