25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

ಬಂಗಾಡಿ: ಬಂಗಾಡಿ ಜೈನ ಬಸದಿ ಎದುರು ಜೂ.25 ರಂದು ಅತಿಯಾದ ಮಳೆಯಿಂದಾಗಿ ಚರಂಡಿ ನಿರ್ವಹಣೆ ಇಲ್ಲದೆ ರಸ್ತೆಯಲ್ಲೇ ಮಳೆಯ ನೀರು ಹರಿದಿದೆ.


ಇಲ್ಲಿ ಇರುವ ಚರಂಡಿ ಅತೀ ಸಣ್ಣದು ಪ್ರತೀ ವರ್ಷ ಇಲ್ಲಿ ಮಳೆ ಬಂದರೆ ನೀರೆಲ್ಲಾ ಚರಂಡಿ ಇಲ್ಲದೆ ಮಾರ್ಗದಲ್ಲೇ ಹರಿಯುತ್ತದೆ. ಇದರಲ್ಲಿ ಬರುವ ನೀರು 10ಪಟ್ಟು ಹೆಚ್ಚು ಇದೆ. ಇಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಜೈನ ಬಸದಿ, ಸಿ.ಎ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಖಾಸಗಿ ಕ್ಲಿನಿಕ್ ಇದೆ. ನೀರು ತುಂಬಿ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ , ಶಾಲಾ ಮಕ್ಕಳಿಗೆ ಕಷ್ಟವಾಗುತ್ತಿದೆ. ಪ್ರತೀ ವರ್ಷ ಮಳೆ ಬಂದರೆ ಇದೇ ಪರಿಸ್ಥಿತಿ. ಇದರ ಬಗ್ಗೆ ಲೋಕೋಪಯೋಗಿ ಇಲಾಖೆ ಮತ್ತು ಇತರ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕಾಗಿದೆ. ಎರಡೂ ಬದಿಯಲ್ಲಿ ಚರಂಡಿ ಇಲ್ಲದೆ ಈ ಪರಿಸ್ಥಿತಿ ಉಂಟಾಗಿದೆ. ಕಳೆದ ಹಲವು ವರ್ಷಗಳಿಂದ ಇದೇ ಅವಸ್ಥೆ ಉಂಟಾಗುತ್ತಿದ್ದು, ಇನ್ನಾದರೂ ಎಚ್ಚೆತ್ತು ಸರಿಪಡಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ. ಮುಂದೆಯೂ ಇದೇ ಮುಂದುವರಿದರೆ ಸಾರ್ವಜನಿಕರು ಪ್ರತಿಭಟನೆ ಮಾಡಬೇಕಾಗಿದೆ ಎಂದು ಆಗ್ರಹಿಸಿದರು.

Related posts

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya
error: Content is protected !!