23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

ಬೆಳ್ತಂಗಡಿ : ಮೂಲ ಸೌಕರ್ಯ ಇಲ್ಲದೆ ಕಳೆದ 10-15 ವರ್ಷಗಳಿಂದ ಯಾವುದೇ ದಾಖಲೆಗಳಿಲ್ಲದೆ ಸರಕಾರಿ ಜಾಗದಲ್ಲಿ ಸಿಮೆಂಟ್ ಬ್ಲಾಕ್ ಮತ್ತು ಸೀಟ್ ನಿಂದ ನಿರ್ಮಿಸಿದ ಕುಠೀರದಲ್ಲಿ ಹಬೆ ಬರುವ ನೆಲದಲ್ಲಿ ಒಂಬಟ್ಟಿಯಾಗಿ ವಾಸಿಸುತ್ತಿದ್ದ ಡೀಕಮ್ಮ(70) ಅವರ ಬದುಕಿನ ವ್ಯಥೆಯ ಕಥತನವನ್ನು ಸುದ್ದಿ ಉದಯ ವಾರ ಪತ್ರಿಕೆ ಜೂ.26 ರಂದು “ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.

ವರದಿ ಪ್ರಕಟಗೊಂಡ ಬೆನ್ನಲ್ಲೇ ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಆಡಳಿತಾಧಿಕಾರಿ ವಿಜೇತ್.ಬಿ ಮತ್ತು ಗ್ರಾ.ಪಂ ಸದಸ್ಯ ಪ್ರವೀಣ್ ಜೂ.26 ರಂದು 12:30 ಗಂಟೆಗೆ ಮನೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳಾದ ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಗಳನ್ನು ಮಾಡಿಕೊಡುವುದಾಗಿ ತಿಳಿಸಿದರು. ನಂತರದ ಹಂತದಲ್ಲಿ ಸದ್ರಿಯವರ ಜಂಟಿ ಖಾತೆಯಲ್ಲಿರುವ ಪಟ್ಟಾ ಸ್ಥಳದಲ್ಲಿ ಮನೆ ನಿರ್ಮಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ನೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದರು.

ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಆಡಳಿತಾಧಿಕಾರಿ ವಿಜೇತ್ ಬಿ , ಗ್ರಾಮ ಪಂಚಾಯತ್ ಸದಸ್ಯರ ಪ್ರವೀಣ್, ಸ್ಥಳೀಯ ಸಂತೋಷ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya
error: Content is protected !!