July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿಸಂಘ-ಸಂಸ್ಥೆಗಳುಸಮಸ್ಯೆಸರ್ಕಾರಿ ಇಲಾಖಾ ಸುದ್ದಿ

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

ಅಳದಂಗಡಿ: ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಎಂಬ ಶಿರ್ಷಿಕೆಯಡಿಯಲ್ಲಿ ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ವಿಶೇಷ ವರದಿ ಜೂ. 26ರಂದು ಪ್ರಕಟ ಮಾಡಿತ್ತು. ವರದಿಯ‌ ಬೆನ್ನಲ್ಲೇ ಗ್ರಾಮ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಅಜ್ಜಿಯ ವ್ಯಥೆಯ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದರು. ಸಂಜೆ ವೇಳೆಗೆ ಅಜ್ಜಿಯ‌ ಶೆಡ್ ಮುಂದೆ ಸೋಲಾರ್ ಲೈಟ್ ಅಳವಡಿಸಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ರವರು ವರದಿ ಗಮನಿಸಿ ಅಜ್ಜಿಗೆ ಸಹಾಯ ಮಾಡುತ್ತಿರುವ ಸ್ಥಳೀಯ ನಿವಾಸಿ ಸಂತೋಷ್ ಎಂಬುವರಿಗೆ ಇಂದು ಕರೆ ಮಾಡಿ ಡೀಕಮ್ಮ ಅಜ್ಜಿಯ ಮಾಹಿತಿ ಪಡೆದುಕೊಂಡರು.

ನಾಳೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರನ್ನು ಸ್ಥಳಕ್ಕೆ ಕಳುಹಿಸಿ ವರದಿ ನೀಡಲು ಸೂಚಿಸಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಸಂತೋಷ್ ತಿಳಿಸಿದ್ದಾರೆ. ಗ್ರಾಮ ಆಡಳಿತಾಧಿಕಾರಿ ವಿಜೇತ್.ಬಿ ಮತ್ತು ಗ್ರಾ.ಪಂ ಸದಸ್ಯ ಪ್ರವೀಣ್ ಜೂ.26 ರಂದು ಡೀಕಮ್ಮ ಅಜ್ಜಿಯ ಮನೆಗೆ ಭೇಟಿ ನೀಡಿದರು. ಯೋಗಕ್ಷೇಮ ವಿಚಾರಿಸಿ ಅಗತ್ಯ ದಾಖಲೆಗಳಾದ ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಗಳನ್ನು ಮಾಡಿಕೊಡದಾಗಿ ತಿಳಿಸಿದರು.

ಮುಂದಿನ ಹಂತದಲ್ಲಿ ಸದ್ರಿಯವರ ಜಂಟಿ ಖಾತೆಯಲ್ಲಿರುವ ಪಟ್ಟಾಸಳದಲ್ಲಿ ಮನೆ ನಿರ್ಮಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ನೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದಾಗಿ ಎಂದು ಭರವಸೆ ನೀಡಿದರು.ಸೋಲಾರ್ ಲೈಟ್ ಅಳವಡಿಸಲು ತಹಶೀಲ್ದಾರ್ ಪೃಥ್ವಿ ಸಾನಿಕಂ , ಅಳದಂಗಡಿ ಪಿಡಿಒ ಪೂರ್ಣಿಮಾ ಅವರು ಸೂಚಿಸಿದ ಮೇರೆಗೆ ಸ್ಥಳೀಯ ನಿವಾಸಿ ಸಂತೋಷ್ ತಂಡ ರಸ್ತೆಯಲ್ಲಿದ್ದ ಸೋಲಾರ್ ಲೈಟ್ ತೆಗೆದು ಅಜ್ಜಿಯ ಮನೆಯ ಹೊರಗಡೆ ಅಳವಡಿಸಿದ್ದಾರೆ‌. ಒಂದೆಡೆ ಜಿಲ್ಲಾ ಅಧಿಕಾರಿಗಳು ಕೂಡ ಕರೆ ಮಾಡಿ ಮಾಹಿತಿ ಪಡೆದು ಕೊಂಡಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಅಜ್ಜಿಯ ವ್ಯಥೆಯನ್ನು ಆಲಿಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸುದ್ದಿ ಉದಯ ವಾರ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷ ರೂ.5 ಕೋಟಿಗೂ ಅಧಿಕ ಮೊತ್ತದ ಉಚಿತ ಡಯಾಲಿಸಿಸ್ ಸೇವೆ, ಉಚಿತ ಜೌಷಧ ಹಾಗೂ ಚಿಕಿತ್ಸೆ: ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!