September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

ಉಜಿರೆ: ಉಜಿರೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಬದಿ ಸಾರ್ವಜನಿಕರು ಓಡಾಟ ನಡೆಸುವಲ್ಲಿ ಬಹಳಷ್ಟು ತೆರೆದ ಚರಂಡಿಗಳಿದ್ದು ಅಪಾಯದ ವಾತಾವರಣವನ್ನು ತಂದೊಡ್ಡಿದೆ.

ಚರಂಡಿ ನಿರ್ಮಾಣ ಕಾಮಗಾರಿ ಅಲ್ಲಲ್ಲಿ ನಡೆದಿದ್ದು ಹೆಚ್ಚಿನ ಕಡೆಗಳಲ್ಲಿ ಚರಂಡಿಗಳನ್ನು ಮುಚ್ಚಿಲ್ಲ, ಚರಂಡಿ ಪ್ರದೇಶಗಳಲ್ಲಿ ಸುಮಾರು 4 ಅಡಿ ಅಂತರದ ತೆರೆದ ಚರಂಡಿಗಳಿದ್ದು, ಪಾದಚಾರಿಗಳು ಬಿದ್ದು ಗಾಯಗೊಂಡ ಘಟನೆ ಇತ್ತೀಚಿಗೆ ಸೋಮಂತಡ್ಕದ ಪ್ರದೇಶದಲ್ಲಿ ನಡೆದಿದೆ.

ಉಜಿರೆ-ಚಾರ್ಮಾಡಿ ರಸ್ತೆಯ ಎಸ್.ಆರ್ ಬಾರ್ ಬಳಿಯ ಟೆಕ್ನೋ ಇಂಡಸ್ಟ್ರೀಸ್, ಗ್ಯಾರೇಜ್ ಮುಂಭಾಗದ 3,4 ಕಡೆಗಳಲ್ಲಿ ತೆರೆದ ಚರಂಡಿಗಳು ಇದ್ದು, ಸಮರ್ಪಕವಾದ ಬೀದಿ ದೀಪಗಳು ಇಲ್ಲದಿರುವ ಕಾರಣ ರಾತ್ರಿ ಹೊತ್ತು ಈ ಚರಂಡಿ ಮೇಲೆ ನಡೆದುಕೊಂಡು ಹೋಗುವುದು ಅಪಾಯವಾಗಿದೆ. ಈ ಚರಂಡಿಯ ನೀರು ನಿಡಿಗಲ್(ನೇತ್ರಾವತಿ) ನದಿಯನ್ನು ಸಂಪರ್ಕಿಸಿದ್ದು, ಬಾರ್ ಮುಂಭಾಗದಲ್ಲೇ ತೆರೆದ ಚರಂಡಿಗಳು ಇರುವ ಕಾರಣ ಕುಡುಕರು ಕುಡಿದ ಅಮಲಿನಲ್ಲಿ ತೇಲಾಡಿ ತೆರೆದ ಚರಂಡಿಯೊಳಗೆ ಬಿದ್ದರೆ ನಿಡಿಗಲ್(ನೇತ್ರಾವತಿ) ನದಿಯಲ್ಲಿ ಹುಡುಕುವ ಪ್ರಸಂಗ ನಡೆದೀತು.

ಈಗಾಗಲೇ ತಾಲೂಕಿನಲ್ಲಿ ಭಾರಿ ಪ್ರಮಾಣದಲ್ಲಿ ಶಂಕಿತ ಡೆಂಗೆ ಪ್ರಕರಣಗಳು ಕಂಡುಬಂದಿದ್ದು ತೆರೆದ ಚರಂಡಿ ಇರುವ ಪ್ರದೇಶಗಳ ಜನರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ತೆರೆದ ಚರಂಡಿ ಕುರಿತು ಆರೋಗ್ಯ ಇಲಾಖೆ, ಪಂಚಾಯಿತಿಗಳು ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸ.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya
error: Content is protected !!