23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ : ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಖಿಲರ್ ಜುಮ್ಮಾ ಮಸೀದಿ ಇದರ ಮುಖ್ಯ ಖತೀಬರಾದ ಹನೀಫ್ ಪೈಝೀ ಯವರು ದುವಾ ನೆರವೇರಿಸಿ ಸಮಸ್ತ ನಡೆದು ಬಂದ ದಾರಿಯನ್ನು ವಿವರಿಸಿದರು. ಅದೇ ರೀತಿ ಈ ಬಾರಿಯ ಸಮಸ್ತದ ನೂರನೇ ಶತಮಾನೋತ್ಸವ ಕಾಸರಗೋಡಿನ ಉದ್ಯಮಿಯಾದ ಇಬ್ರಾಹಿಂ ಹಾಜಿ ಕುಣಿಯವರ ವಿಶಾಲವಾದ ಮೈದಾನದಲ್ಲಿ ನಡೆಯಲಿದೆ ಎಂದರು.



ಖಿಲರ್ ಜುಮ್ಮಾ ಮಸೀದಿ ಇದರ ಪ್ರಧಾನ ಕಾರ್ಯದರ್ಶಿ ಗಳಾದ ರಝಾಕ್ ಬಿ.ಎಚ್, ಕಾರ್ಯದರ್ಶಿಗಳಾದ ಮಹಮ್ಮದ್ ಕುದ್ರಡ್ಕ, ಸಮಿತಿ ಸದಸ್ಯರುಗಳಾದ ಅಬ್ದುಲ್ ರಹಮಾನ್, ಬಶೀರ್, ಶರೀಫ್ ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಅಬ್ದುಲ್ ರಹಮಾನ್ ಮದನಿ ಸ್ವಾಗತಿಸಿ, ಅಶ್ರಫ್ ಮುಸ್ಲಿಯಾರ್ ವಂದಿಸಿದರು.ಮುಖ್ಯೋಪಾಧ್ಯಾಯರಾದ ಸಿದ್ಧಿಕ್ ಅಝ್ಹರಿ ಕಾರ್ಯಕ್ರಮ ನಿರೂಪಿಸಿದರು.

Related posts

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya
error: Content is protected !!