September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

ಬೆಳ್ತಂಗಡಿ: ತುಳುನಾಡಿನ ಸಾಂಸ್ಕೃತಿಕ ಅಧ್ಯಯನ ಮತ್ತು ಭಾಷಾ ಚಟುವಟಿಕೆಗಳಲ್ಲಿ ನಿರಂತರವಾಗಿ ಕೊಡುಗೆ ನೀಡುತ್ತಿರುವ ಡಾ. ದಿವಾಕರ ಕೆ. (ದಿವ ಕೊಕ್ಕಡ) ಅವರನ್ನು ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕರಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಈ ನೇಮಕಾತಿ ತುಳುನಾಡಿನ ಪರಂಪರೆ, ಸಂಸ್ಕೃತಿ ಮತ್ತು ಭಾಷೆಯ ಸಂರಕ್ಷಣೆಗೆ ನೂರಾರು ವರ್ಷಗಳಿಂದ ಶ್ರಮಿಸುತ್ತಿರುವ ಮಹಾಸಭೆಯ ಶತಮಾನೋತ್ಸವ ಪುನಶ್ಚೇತನ ಅಭಿಯಾನಕ್ಕೆ ಶಕ್ತಿಯುತ ಸಹಕಾರ ನೀಡಲಿದೆ ಎಂದು ಸಂಘಟಕರ ಅಭಿಪ್ರಾಯಪಟ್ಟಿದ್ದಾರೆ.

ಡಾ. ದಿವ ಕೊಕ್ಕಡ ಅವರು ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಹಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಡಾ. ಹಾಮಾನಾ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಗಳೂ ಆಗಿದ್ದಾರೆ. ತುಳುನಾಡಿನ ವಾರ್ಷಿಕ ಆಚರಣೆಗಳ ಕುರಿತು ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್.ಡಿ. ಪದವಿ ಲಭಿಸಿದೆ.

Related posts

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನೆರಿಯ: ರಬ್ಬರ್ ತೋಟದಲ್ಲಿ ಚಿರತೆ ಓಡಾಟ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya
error: Content is protected !!