23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

ಬೆಳ್ತಂಗಡಿ: ತುಳುನಾಡಿನ ಸಾಂಸ್ಕೃತಿಕ ಅಧ್ಯಯನ ಮತ್ತು ಭಾಷಾ ಚಟುವಟಿಕೆಗಳಲ್ಲಿ ನಿರಂತರವಾಗಿ ಕೊಡುಗೆ ನೀಡುತ್ತಿರುವ ಡಾ. ದಿವಾಕರ ಕೆ. (ದಿವ ಕೊಕ್ಕಡ) ಅವರನ್ನು ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕರಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಈ ನೇಮಕಾತಿ ತುಳುನಾಡಿನ ಪರಂಪರೆ, ಸಂಸ್ಕೃತಿ ಮತ್ತು ಭಾಷೆಯ ಸಂರಕ್ಷಣೆಗೆ ನೂರಾರು ವರ್ಷಗಳಿಂದ ಶ್ರಮಿಸುತ್ತಿರುವ ಮಹಾಸಭೆಯ ಶತಮಾನೋತ್ಸವ ಪುನಶ್ಚೇತನ ಅಭಿಯಾನಕ್ಕೆ ಶಕ್ತಿಯುತ ಸಹಕಾರ ನೀಡಲಿದೆ ಎಂದು ಸಂಘಟಕರ ಅಭಿಪ್ರಾಯಪಟ್ಟಿದ್ದಾರೆ.

ಡಾ. ದಿವ ಕೊಕ್ಕಡ ಅವರು ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಹಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಡಾ. ಹಾಮಾನಾ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಗಳೂ ಆಗಿದ್ದಾರೆ. ತುಳುನಾಡಿನ ವಾರ್ಷಿಕ ಆಚರಣೆಗಳ ಕುರಿತು ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್.ಡಿ. ಪದವಿ ಲಭಿಸಿದೆ.

Related posts

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2026

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya
error: Content is protected !!