23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ವಿದ್ಯಾರ್ಥಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ ಇಂದು (ಜೂನ್ 25) ನಡೆಯಿತು.

ಕಾರ್ಯಕ್ರಮವನ್ನು ಎಸ್ ಡಿ ಎಂ ಪಿಯು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ದಿವ್ಯ ಕುಮಾರಿ ಕೆ ಉದ್ಘಾಟಿಸಿ, ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿ ನಾಯಕತ್ವದ ಮಹತ್ವ ಹಾಗೂ ಜವಾಬ್ದಾರಿಗಳ ಬಗ್ಗೆ ನುಡಿಗಳನ್ನಾಡಿದರು ಮತ್ತು ನೂತನ ಮಂತ್ರಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ.ಆರ್. ಅವರು ಮಂತ್ರಿಗಳಿಗೆ ಬ್ಯಾಡ್ಜ್ ಧರಿಸಿ ಗೌರವಿಸಿದರು.

ಶಾಲಾ ನಾಯಕಿ ಪೂರ್ವಿ ಮತ್ತು ಉಪನಾಯಕ ಶ್ರೀ ವಿನೀತ್ ತಮ್ಮ ಧನ್ಯವಾದಗಳನ್ನು ವ್ಯಕ್ತಪಡಿಸಿ, ನಡವಳಿಕೆಯ ಮೂಲಕ ನೇತೃತ್ವದ ನೈಜ ಅರ್ಥವನ್ನು ತೋರಿಸುವ ಭರವಸೆ ನೀಡಿದರು.

ಅನಘ ಸ್ವಾಗತಿಸಿದರು, ರಕ್ಷಣ್ ಅತಿಥಿ ಪರಿಚಯ ನೀಡಿದರು, ಸಂಜನಾ ವಂದನಾರ್ಪಣೆ ಸಲ್ಲಿಸಿದರು ಹಾಗೂ ನಿಧಿಶಾ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದರು.

Related posts

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya
error: Content is protected !!