30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

ಪುಂಜಾಲಕಟ್ಟೆ: ಸ್ಪಂದನ ಆಟೋ ಚಾಲಕ ಮಾಲಕ ಸಂಘದಿಂದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರನ್ನು ಭೇಟಿ ಮಾಡಿ ರಸ್ತೆ ದುರಸ್ತಿ ಹಾಗೂ ಸಂಘದ ಇತರ ಬೇಡಿಕೆಗೆ ಸ್ಪಂದಿಸಬೇಕೆಂದು ಮನವಿ ಮಾಡಿದರು.

ಆಟೋ ಚಾಲಕ ಮಾಲಕ ಸಂಘದ ಬೇಡಿಕೆಗೆ ಸ್ಪಂದಿಸಿದ ಶಾಸಕರು ಪುಂಜಾಲಕಟ್ಟೆ ಪುರಿಯ‌ ರಸ್ತೆಗೆ ತಾತ್ಕಾಲಿಕ ಪರಿಹಾರ ಹಾಗೂ ಜನವರಿಯಲ್ಲಿ ಮರು ಡಾಂಬರೀಕರಣ ಮಾಡಿಸುತ್ತೇನೆಂದು ಭರವಸೆ ನೀಡಿದರು ಹಾಗೂ ಪೆರ್ಡೇ ಕ್ರಾಸ್ ನಿಂದ ಉರ್ಲಾವರೆಗಿನ ಕಾಂಕ್ರೀಟ್ ರಸ್ತೆಯ ಕೆಲಸ ಒಂದು ವಾರದಲ್ಲಿ ಆರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಎಸ್ ಪುಂಜಾಲಕಟ್ಟೆ ಅಧ್ಯಕ್ಷ ದಿವಾಕರ್ ಶೆಟ್ಟಿ ಕಂಗಿತ್ತಿಲು, ಸ್ಪಂದನ ಆಟೋ ಚಾಲಕರ ಮಾಲಕರ ಸಂಘದ ಗೌರವ ಅಧ್ಯಕ್ಷರಾದ ಗ್ರೇಗೊರಿ ಮಿರಂದ, ಅಧ್ಯಕ್ಷರಾದ ರಘುವೀರ್ ಬಾಳಿಗ, ಕಾರ್ಯದರ್ಶಿ ಯೋಗೀಶ್ ಧರ್ಬೇ, ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ, ಕೋಶಾಧಿಕಾರಿ ಜಯರಾಮ್ ಗರ್ಡಾಡಿ, ಮಾಲಾಡಿ ಪಂಚಾಯತ್ ಸದಸ್ಯರಾದ ಬೆನೆಡಿಕ್ಟ್ ಮಿರಂದ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

Suddi Udaya
error: Content is protected !!