July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

ಪುಂಜಾಲಕಟ್ಟೆ: ಸ್ಪಂದನ ಆಟೋ ಚಾಲಕ ಮಾಲಕ ಸಂಘದಿಂದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರನ್ನು ಭೇಟಿ ಮಾಡಿ ರಸ್ತೆ ದುರಸ್ತಿ ಹಾಗೂ ಸಂಘದ ಇತರ ಬೇಡಿಕೆಗೆ ಸ್ಪಂದಿಸಬೇಕೆಂದು ಮನವಿ ಮಾಡಿದರು.

ಆಟೋ ಚಾಲಕ ಮಾಲಕ ಸಂಘದ ಬೇಡಿಕೆಗೆ ಸ್ಪಂದಿಸಿದ ಶಾಸಕರು ಪುಂಜಾಲಕಟ್ಟೆ ಪುರಿಯ‌ ರಸ್ತೆಗೆ ತಾತ್ಕಾಲಿಕ ಪರಿಹಾರ ಹಾಗೂ ಜನವರಿಯಲ್ಲಿ ಮರು ಡಾಂಬರೀಕರಣ ಮಾಡಿಸುತ್ತೇನೆಂದು ಭರವಸೆ ನೀಡಿದರು ಹಾಗೂ ಪೆರ್ಡೇ ಕ್ರಾಸ್ ನಿಂದ ಉರ್ಲಾವರೆಗಿನ ಕಾಂಕ್ರೀಟ್ ರಸ್ತೆಯ ಕೆಲಸ ಒಂದು ವಾರದಲ್ಲಿ ಆರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಎಸ್ ಪುಂಜಾಲಕಟ್ಟೆ ಅಧ್ಯಕ್ಷ ದಿವಾಕರ್ ಶೆಟ್ಟಿ ಕಂಗಿತ್ತಿಲು, ಸ್ಪಂದನ ಆಟೋ ಚಾಲಕರ ಮಾಲಕರ ಸಂಘದ ಗೌರವ ಅಧ್ಯಕ್ಷರಾದ ಗ್ರೇಗೊರಿ ಮಿರಂದ, ಅಧ್ಯಕ್ಷರಾದ ರಘುವೀರ್ ಬಾಳಿಗ, ಕಾರ್ಯದರ್ಶಿ ಯೋಗೀಶ್ ಧರ್ಬೇ, ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ, ಕೋಶಾಧಿಕಾರಿ ಜಯರಾಮ್ ಗರ್ಡಾಡಿ, ಮಾಲಾಡಿ ಪಂಚಾಯತ್ ಸದಸ್ಯರಾದ ಬೆನೆಡಿಕ್ಟ್ ಮಿರಂದ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಳೆ(ಜೂ.21) ನೀಟ್ ಮರು ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು

Suddi Udaya

ರೂ.23 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಶಿಲಾನ್ಯಾಸ

Suddi Udaya
error: Content is protected !!