22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

ಬೆಳ್ತಂಗಡಿ : ಮೂಲ ಸೌಕರ್ಯ ಇಲ್ಲದೆ ಕಳೆದ 10-15 ವರ್ಷಗಳಿಂದ ಯಾವುದೇ ದಾಖಲೆಗಳಿಲ್ಲದೆ ಸರಕಾರಿ ಜಾಗದಲ್ಲಿ ಸಿಮೆಂಟ್ ಬ್ಲಾಕ್ ಮತ್ತು ಸೀಟ್ ನಿಂದ ನಿರ್ಮಿಸಿದ ಕುಠೀರದಲ್ಲಿ ಹಬೆ ಬರುವ ನೆಲದಲ್ಲಿ ಒಂಬಟ್ಟಿಯಾಗಿ ವಾಸಿಸುತ್ತಿದ್ದ ಡೀಕಮ್ಮ(70) ಅವರ ಬದುಕಿನ ವ್ಯಥೆಯ ಕಥತನವನ್ನು ಸುದ್ದಿ ಉದಯ ವಾರ ಪತ್ರಿಕೆ ಜೂ.26 ರಂದು “ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.

ವರದಿ ಪ್ರಕಟಗೊಂಡ ಬೆನ್ನಲ್ಲೇ ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಆಡಳಿತಾಧಿಕಾರಿ ವಿಜೇತ್.ಬಿ ಮತ್ತು ಗ್ರಾ.ಪಂ ಸದಸ್ಯ ಪ್ರವೀಣ್ ಜೂ.26 ರಂದು 12:30 ಗಂಟೆಗೆ ಮನೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳಾದ ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಗಳನ್ನು ಮಾಡಿಕೊಡುವುದಾಗಿ ತಿಳಿಸಿದರು. ನಂತರದ ಹಂತದಲ್ಲಿ ಸದ್ರಿಯವರ ಜಂಟಿ ಖಾತೆಯಲ್ಲಿರುವ ಪಟ್ಟಾ ಸ್ಥಳದಲ್ಲಿ ಮನೆ ನಿರ್ಮಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ನೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದರು.

ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಆಡಳಿತಾಧಿಕಾರಿ ವಿಜೇತ್ ಬಿ , ಗ್ರಾಮ ಪಂಚಾಯತ್ ಸದಸ್ಯರ ಪ್ರವೀಣ್, ಸ್ಥಳೀಯ ಸಂತೋಷ್ ಉಪಸ್ಥಿತರಿದ್ದರು.

Related posts

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ. ಹಿ. ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಕನ್ಯಾಡಿ ಸೇವಾಭಾರತಿಗೆ ಮಂಗಳೂರು ಸಿ.ಆರ್ 3 ಕಂಪೆನಿಯಿಂದ ರೂ. 5 ಲಕ್ಷ ದೇಣಿಗೆ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya
error: Content is protected !!