22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

ಅಳದಂಗಡಿ: ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಎಂಬ ಶಿರ್ಷಿಕೆಯಡಿಯಲ್ಲಿ ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ವಿಶೇಷ ವರದಿ ಜೂ. 26ರಂದು ಪ್ರಕಟ ಮಾಡಿತ್ತು. ವರದಿಯ‌ ಬೆನ್ನಲ್ಲೇ ಗ್ರಾಮ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಅಜ್ಜಿಯ ವ್ಯಥೆಯ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದರು. ಸಂಜೆ ವೇಳೆಗೆ ಅಜ್ಜಿಯ‌ ಶೆಡ್ ಮುಂದೆ ಸೋಲಾರ್ ಲೈಟ್ ಅಳವಡಿಸಲಾಗಿದೆ.

ಜಿಲ್ಲಾಧಿಕಾರಿ ದರ್ಶನ್ ರವರು ವರದಿ ಗಮನಿಸಿ ಅಜ್ಜಿಗೆ ಸಹಾಯ ಮಾಡುತ್ತಿರುವ ಸ್ಥಳೀಯ ನಿವಾಸಿ ಸಂತೋಷ್ ಎಂಬುವರಿಗೆ ಇಂದು ಕರೆ ಮಾಡಿ ಡೀಕಮ್ಮ ಅಜ್ಜಿಯ ಮಾಹಿತಿ ಪಡೆದುಕೊಂಡರು. ನಾಳೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರನ್ನು ಸ್ಥಳಕ್ಕೆ ಕಳುಹಿಸಿ ವರದಿ ನೀಡಲು ಸೂಚಿಸಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಸಂತೋಷ್ ತಿಳಿಸಿದ್ದಾರೆ.

ಗ್ರಾಮ ಆಡಳಿತಾಧಿಕಾರಿ ವಿಜೇತ್.ಬಿ ಮತ್ತು ಗ್ರಾ.ಪಂ ಸದಸ್ಯ ಪ್ರವೀಣ್ ಜೂ.26 ರಂದು ಡೀಕಮ್ಮ ಅಜ್ಜಿಯ ಮನೆಗೆ ಭೇಟಿ ನೀಡಿದರು. ಯೋಗಕ್ಷೇಮ ವಿಚಾರಿಸಿ ಅಗತ್ಯ ದಾಖಲೆಗಳಾದ ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಗಳನ್ನು ಮಾಡಿಕೊಡದಾಗಿ ತಿಳಿಸಿದರು. ಮುಂದಿನ ಹಂತದಲ್ಲಿ ಸದ್ರಿಯವರ ಜಂಟಿ ಖಾತೆಯಲ್ಲಿರುವ ಪಟ್ಟಾಸಳದಲ್ಲಿ ಮನೆ ನಿರ್ಮಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ನೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದಾಗಿ ಎಂದು ಭರವಸೆ ನೀಡಿದರು.

ಸೋಲಾರ್ ಲೈಟ್ ಅಳವಡಿಸಲು ತಹಶೀಲ್ದಾರ್ ಪೃಥ್ವಿ ಸಾನಿಕಂ , ಅಳದಂಗಡಿ ಪಿಡಿಒ ಪೂರ್ಣಿಮಾ ಅವರು ಸೂಚಿಸಿದ ಮೇರೆಗೆ ಸ್ಥಳೀಯ ನಿವಾಸಿ ಸಂತೋಷ್ ತಂಡ ರಸ್ತೆಯಲ್ಲಿದ್ದ ಸೋಲಾರ್ ಲೈಟ್ ತೆಗೆದು ಅಜ್ಜಿಯ ಮನೆಯ ಹೊರಗಡೆ ಅಳವಡಿಸಿದ್ದಾರೆ‌. ಒಂದೆಡೆ ಜಿಲ್ಲಾ ಅಧಿಕಾರಿಗಳು ಕೂಡ ಕರೆ ಮಾಡಿ ಮಾಹಿತಿ ಪಡೆದು ಕೊಂಡಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಅಜ್ಜಿಯ ವ್ಯಥೆಯನ್ನು ಆಲಿಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸುದ್ದಿ ಉದಯ ವಾರ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!