24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

ಉಜಿರೆ: ಉಜಿರೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಬದಿ ಸಾರ್ವಜನಿಕರು ಓಡಾಟ ನಡೆಸುವಲ್ಲಿ ಬಹಳಷ್ಟು ತೆರೆದ ಚರಂಡಿಗಳಿದ್ದು ಅಪಾಯದ ವಾತಾವರಣವನ್ನು ತಂದೊಡ್ಡಿದೆ.

ಚರಂಡಿ ನಿರ್ಮಾಣ ಕಾಮಗಾರಿ ಅಲ್ಲಲ್ಲಿ ನಡೆದಿದ್ದು ಹೆಚ್ಚಿನ ಕಡೆಗಳಲ್ಲಿ ಚರಂಡಿಗಳನ್ನು ಮುಚ್ಚಿಲ್ಲ, ಚರಂಡಿ ಪ್ರದೇಶಗಳಲ್ಲಿ ಸುಮಾರು 4 ಅಡಿ ಅಂತರದ ತೆರೆದ ಚರಂಡಿಗಳಿದ್ದು, ಪಾದಚಾರಿಗಳು ಬಿದ್ದು ಗಾಯಗೊಂಡ ಘಟನೆ ಇತ್ತೀಚಿಗೆ ಸೋಮಂತಡ್ಕದ ಪ್ರದೇಶದಲ್ಲಿ ನಡೆದಿದೆ.

ಉಜಿರೆ-ಚಾರ್ಮಾಡಿ ರಸ್ತೆಯ ಎಸ್.ಆರ್ ಬಾರ್ ಬಳಿಯ ಟೆಕ್ನೋ ಇಂಡಸ್ಟ್ರೀಸ್, ಗ್ಯಾರೇಜ್ ಮುಂಭಾಗದ 3,4 ಕಡೆಗಳಲ್ಲಿ ತೆರೆದ ಚರಂಡಿಗಳು ಇದ್ದು, ಸಮರ್ಪಕವಾದ ಬೀದಿ ದೀಪಗಳು ಇಲ್ಲದಿರುವ ಕಾರಣ ರಾತ್ರಿ ಹೊತ್ತು ಈ ಚರಂಡಿ ಮೇಲೆ ನಡೆದುಕೊಂಡು ಹೋಗುವುದು ಅಪಾಯವಾಗಿದೆ. ಈ ಚರಂಡಿಯ ನೀರು ನಿಡಿಗಲ್(ನೇತ್ರಾವತಿ) ನದಿಯನ್ನು ಸಂಪರ್ಕಿಸಿದ್ದು, ಬಾರ್ ಮುಂಭಾಗದಲ್ಲೇ ತೆರೆದ ಚರಂಡಿಗಳು ಇರುವ ಕಾರಣ ಕುಡುಕರು ಕುಡಿದ ಅಮಲಿನಲ್ಲಿ ತೇಲಾಡಿ ತೆರೆದ ಚರಂಡಿಯೊಳಗೆ ಬಿದ್ದರೆ ನಿಡಿಗಲ್(ನೇತ್ರಾವತಿ) ನದಿಯಲ್ಲಿ ಹುಡುಕುವ ಪ್ರಸಂಗ ನಡೆದೀತು.

ಈಗಾಗಲೇ ತಾಲೂಕಿನಲ್ಲಿ ಭಾರಿ ಪ್ರಮಾಣದಲ್ಲಿ ಶಂಕಿತ ಡೆಂಗೆ ಪ್ರಕರಣಗಳು ಕಂಡುಬಂದಿದ್ದು ತೆರೆದ ಚರಂಡಿ ಇರುವ ಪ್ರದೇಶಗಳ ಜನರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ತೆರೆದ ಚರಂಡಿ ಕುರಿತು ಆರೋಗ್ಯ ಇಲಾಖೆ, ಪಂಚಾಯಿತಿಗಳು ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸ.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!