July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

ಉಜಿರೆ: ಉಜಿರೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಬದಿ ಸಾರ್ವಜನಿಕರು ಓಡಾಟ ನಡೆಸುವಲ್ಲಿ ಬಹಳಷ್ಟು ತೆರೆದ ಚರಂಡಿಗಳಿದ್ದು ಅಪಾಯದ ವಾತಾವರಣವನ್ನು ತಂದೊಡ್ಡಿದೆ.

ಚರಂಡಿ ನಿರ್ಮಾಣ ಕಾಮಗಾರಿ ಅಲ್ಲಲ್ಲಿ ನಡೆದಿದ್ದು ಹೆಚ್ಚಿನ ಕಡೆಗಳಲ್ಲಿ ಚರಂಡಿಗಳನ್ನು ಮುಚ್ಚಿಲ್ಲ, ಚರಂಡಿ ಪ್ರದೇಶಗಳಲ್ಲಿ ಸುಮಾರು 4 ಅಡಿ ಅಂತರದ ತೆರೆದ ಚರಂಡಿಗಳಿದ್ದು, ಪಾದಚಾರಿಗಳು ಬಿದ್ದು ಗಾಯಗೊಂಡ ಘಟನೆ ಇತ್ತೀಚಿಗೆ ಸೋಮಂತಡ್ಕದ ಪ್ರದೇಶದಲ್ಲಿ ನಡೆದಿದೆ.

ಉಜಿರೆ-ಚಾರ್ಮಾಡಿ ರಸ್ತೆಯ ಎಸ್.ಆರ್ ಬಾರ್ ಬಳಿಯ ಟೆಕ್ನೋ ಇಂಡಸ್ಟ್ರೀಸ್, ಗ್ಯಾರೇಜ್ ಮುಂಭಾಗದ 3,4 ಕಡೆಗಳಲ್ಲಿ ತೆರೆದ ಚರಂಡಿಗಳು ಇದ್ದು, ಸಮರ್ಪಕವಾದ ಬೀದಿ ದೀಪಗಳು ಇಲ್ಲದಿರುವ ಕಾರಣ ರಾತ್ರಿ ಹೊತ್ತು ಈ ಚರಂಡಿ ಮೇಲೆ ನಡೆದುಕೊಂಡು ಹೋಗುವುದು ಅಪಾಯವಾಗಿದೆ. ಈ ಚರಂಡಿಯ ನೀರು ನಿಡಿಗಲ್(ನೇತ್ರಾವತಿ) ನದಿಯನ್ನು ಸಂಪರ್ಕಿಸಿದ್ದು, ಬಾರ್ ಮುಂಭಾಗದಲ್ಲೇ ತೆರೆದ ಚರಂಡಿಗಳು ಇರುವ ಕಾರಣ ಕುಡುಕರು ಕುಡಿದ ಅಮಲಿನಲ್ಲಿ ತೇಲಾಡಿ ತೆರೆದ ಚರಂಡಿಯೊಳಗೆ ಬಿದ್ದರೆ ನಿಡಿಗಲ್(ನೇತ್ರಾವತಿ) ನದಿಯಲ್ಲಿ ಹುಡುಕುವ ಪ್ರಸಂಗ ನಡೆದೀತು.

ಈಗಾಗಲೇ ತಾಲೂಕಿನಲ್ಲಿ ಭಾರಿ ಪ್ರಮಾಣದಲ್ಲಿ ಶಂಕಿತ ಡೆಂಗೆ ಪ್ರಕರಣಗಳು ಕಂಡುಬಂದಿದ್ದು ತೆರೆದ ಚರಂಡಿ ಇರುವ ಪ್ರದೇಶಗಳ ಜನರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ತೆರೆದ ಚರಂಡಿ ಕುರಿತು ಆರೋಗ್ಯ ಇಲಾಖೆ, ಪಂಚಾಯಿತಿಗಳು ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸ.

Related posts

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya
error: Content is protected !!