25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

ಉಜಿರೆ: ಉಜಿರೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಬದಿ ಸಾರ್ವಜನಿಕರು ಓಡಾಟ ನಡೆಸುವಲ್ಲಿ ಬಹಳಷ್ಟು ತೆರೆದ ಚರಂಡಿಗಳಿದ್ದು ಅಪಾಯದ ವಾತಾವರಣವನ್ನು ತಂದೊಡ್ಡಿದೆ.

ಚರಂಡಿ ನಿರ್ಮಾಣ ಕಾಮಗಾರಿ ಅಲ್ಲಲ್ಲಿ ನಡೆದಿದ್ದು ಹೆಚ್ಚಿನ ಕಡೆಗಳಲ್ಲಿ ಚರಂಡಿಗಳನ್ನು ಮುಚ್ಚಿಲ್ಲ, ಚರಂಡಿ ಪ್ರದೇಶಗಳಲ್ಲಿ ಸುಮಾರು 4 ಅಡಿ ಅಂತರದ ತೆರೆದ ಚರಂಡಿಗಳಿದ್ದು, ಪಾದಚಾರಿಗಳು ಬಿದ್ದು ಗಾಯಗೊಂಡ ಘಟನೆ ಇತ್ತೀಚಿಗೆ ಸೋಮಂತಡ್ಕದ ಪ್ರದೇಶದಲ್ಲಿ ನಡೆದಿದೆ.

ಉಜಿರೆ-ಚಾರ್ಮಾಡಿ ರಸ್ತೆಯ ಎಸ್.ಆರ್ ಬಾರ್ ಬಳಿಯ ಟೆಕ್ನೋ ಇಂಡಸ್ಟ್ರೀಸ್, ಗ್ಯಾರೇಜ್ ಮುಂಭಾಗದ 3,4 ಕಡೆಗಳಲ್ಲಿ ತೆರೆದ ಚರಂಡಿಗಳು ಇದ್ದು, ಸಮರ್ಪಕವಾದ ಬೀದಿ ದೀಪಗಳು ಇಲ್ಲದಿರುವ ಕಾರಣ ರಾತ್ರಿ ಹೊತ್ತು ಈ ಚರಂಡಿ ಮೇಲೆ ನಡೆದುಕೊಂಡು ಹೋಗುವುದು ಅಪಾಯವಾಗಿದೆ. ಈ ಚರಂಡಿಯ ನೀರು ನಿಡಿಗಲ್(ನೇತ್ರಾವತಿ) ನದಿಯನ್ನು ಸಂಪರ್ಕಿಸಿದ್ದು, ಬಾರ್ ಮುಂಭಾಗದಲ್ಲೇ ತೆರೆದ ಚರಂಡಿಗಳು ಇರುವ ಕಾರಣ ಕುಡುಕರು ಕುಡಿದ ಅಮಲಿನಲ್ಲಿ ತೇಲಾಡಿ ತೆರೆದ ಚರಂಡಿಯೊಳಗೆ ಬಿದ್ದರೆ ನಿಡಿಗಲ್(ನೇತ್ರಾವತಿ) ನದಿಯಲ್ಲಿ ಹುಡುಕುವ ಪ್ರಸಂಗ ನಡೆದೀತು.

ಈಗಾಗಲೇ ತಾಲೂಕಿನಲ್ಲಿ ಭಾರಿ ಪ್ರಮಾಣದಲ್ಲಿ ಶಂಕಿತ ಡೆಂಗೆ ಪ್ರಕರಣಗಳು ಕಂಡುಬಂದಿದ್ದು ತೆರೆದ ಚರಂಡಿ ಇರುವ ಪ್ರದೇಶಗಳ ಜನರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ತೆರೆದ ಚರಂಡಿ ಕುರಿತು ಆರೋಗ್ಯ ಇಲಾಖೆ, ಪಂಚಾಯಿತಿಗಳು ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸ.

Related posts

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya
error: Content is protected !!