September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

ಉಜಿರೆ: ಉಜಿರೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಬದಿ ಸಾರ್ವಜನಿಕರು ಓಡಾಟ ನಡೆಸುವಲ್ಲಿ ಬಹಳಷ್ಟು ತೆರೆದ ಚರಂಡಿಗಳಿದ್ದು ಅಪಾಯದ ವಾತಾವರಣವನ್ನು ತಂದೊಡ್ಡಿದೆ.

ಚರಂಡಿ ನಿರ್ಮಾಣ ಕಾಮಗಾರಿ ಅಲ್ಲಲ್ಲಿ ನಡೆದಿದ್ದು ಹೆಚ್ಚಿನ ಕಡೆಗಳಲ್ಲಿ ಚರಂಡಿಗಳನ್ನು ಮುಚ್ಚಿಲ್ಲ, ಚರಂಡಿ ಪ್ರದೇಶಗಳಲ್ಲಿ ಸುಮಾರು 4 ಅಡಿ ಅಂತರದ ತೆರೆದ ಚರಂಡಿಗಳಿದ್ದು, ಪಾದಚಾರಿಗಳು ಬಿದ್ದು ಗಾಯಗೊಂಡ ಘಟನೆ ಇತ್ತೀಚಿಗೆ ಸೋಮಂತಡ್ಕದ ಪ್ರದೇಶದಲ್ಲಿ ನಡೆದಿದೆ.

ಉಜಿರೆ-ಚಾರ್ಮಾಡಿ ರಸ್ತೆಯ ಎಸ್.ಆರ್ ಬಾರ್ ಬಳಿಯ ಟೆಕ್ನೋ ಇಂಡಸ್ಟ್ರೀಸ್, ಗ್ಯಾರೇಜ್ ಮುಂಭಾಗದ 3,4 ಕಡೆಗಳಲ್ಲಿ ತೆರೆದ ಚರಂಡಿಗಳು ಇದ್ದು, ಸಮರ್ಪಕವಾದ ಬೀದಿ ದೀಪಗಳು ಇಲ್ಲದಿರುವ ಕಾರಣ ರಾತ್ರಿ ಹೊತ್ತು ಈ ಚರಂಡಿ ಮೇಲೆ ನಡೆದುಕೊಂಡು ಹೋಗುವುದು ಅಪಾಯವಾಗಿದೆ. ಈ ಚರಂಡಿಯ ನೀರು ನಿಡಿಗಲ್(ನೇತ್ರಾವತಿ) ನದಿಯನ್ನು ಸಂಪರ್ಕಿಸಿದ್ದು, ಬಾರ್ ಮುಂಭಾಗದಲ್ಲೇ ತೆರೆದ ಚರಂಡಿಗಳು ಇರುವ ಕಾರಣ ಕುಡುಕರು ಕುಡಿದ ಅಮಲಿನಲ್ಲಿ ತೇಲಾಡಿ ತೆರೆದ ಚರಂಡಿಯೊಳಗೆ ಬಿದ್ದರೆ ನಿಡಿಗಲ್(ನೇತ್ರಾವತಿ) ನದಿಯಲ್ಲಿ ಹುಡುಕುವ ಪ್ರಸಂಗ ನಡೆದೀತು.

ಈಗಾಗಲೇ ತಾಲೂಕಿನಲ್ಲಿ ಭಾರಿ ಪ್ರಮಾಣದಲ್ಲಿ ಶಂಕಿತ ಡೆಂಗೆ ಪ್ರಕರಣಗಳು ಕಂಡುಬಂದಿದ್ದು ತೆರೆದ ಚರಂಡಿ ಇರುವ ಪ್ರದೇಶಗಳ ಜನರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ತೆರೆದ ಚರಂಡಿ ಕುರಿತು ಆರೋಗ್ಯ ಇಲಾಖೆ, ಪಂಚಾಯಿತಿಗಳು ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸ.

Related posts

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ನಿಡ್ಲೆ : ಕಾಟ್ಲ ಪರಿಸರದಲ್ಲಿ ಕಾಡಾನೆ ಹಾವಳಿ

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya
error: Content is protected !!